ಸೋಮವಾರ, ಮೇ 11, 2009

ನೀವು ಕೇಳದಿರಿ - 9

* ಬಿಜೆಪಿ ನೇತೃತ್ವದ ಎನ್‌ಡಿಎ ದಿಢೀರನೆ ಒಗ್ಗಟ್ಟು ಪ್ರದರ್ಶಿಸ್ತಾ ಇದೆ! ಮುಂದೆ?

- ರಾಷ್ಟ್ರಮಟ್ಟದಲ್ಲಿ ’ಆಪರೇಷನ್ ಕಮಲ್’!

+++

* ’ಆಪರೇಷನ್ ಕಮಲ’ದಿಂದ ಜನತೆಗೆ ಏನು ಲಾಭ?

- (ಕಮಲದ) ದಂಟು!
ನಾಗರಿಕರಿಗೆ ಬೇಕಾಗಿರೋದು ಸರ್ಕಾರಿ ಅಧಿಕಾರಿಗಳ ಕೋ-ಆಪರೇಷನ್.
ಬಡವರಿಗೆ ಬೇಕಾಗಿರೋದು ರೇಷನ್.

+++

* ಬಿಜೆಪಿ ಪರವಾಗಿ ಮಾತನಾಡುವ ಮಠಾಧೀಶರು ಭಕ್ತರಿಗೆ ಆಶೀರ್ವಾದ ಮಾಡುವಾಗ ’ಹಸ್ತ’ ತೋರಿಸುತ್ತಾರಲ್ಲಾ?!

- ಮತ್ತೇನು, ಕೈಯಲ್ಲಿ ಕಮಲ ಹಿಡಕೊಂಡು ಆಶೀರ್ವಾದ ಮಾಡಬೇಕೇ?

+++

* ಪಕ್ಷದಿಂದ ವಜಾ ಆದರೆ ಅಮರ್ ಸಿಂಗ್ ಆಗ ಏನು ಮಾಡುತ್ತಾರೆ?

- ದಂಡಿಯಾಗಿ ದುಡ್ಡೂ ಇದೆ, ಕೆಲ್ಸಾನೂ ಇಲ್ಲ, ಅಮಿತಾಭ್ ಬಚ್ಚನ್‌ನ ಫುಲ್ ಫ್ಯಾಮಿಲಿ ಹಾಕ್ಕೊಂಡು ಸಿನಿಮಾ ತೆಗೀತಾರೆ! ಜಯಪ್ರದಾಗೆ ವಿಶೇಷ ಪಾತ್ರ.

+++

* ಶ್ರೀಲಂಕಾದಲ್ಲಿ ತಮಿಳು ನಿರಾಶ್ರಿತರಿಗೆ ಸುಲಿಗೆಕೋರರ ಹಾವಳಿಯಂತೆ?

- ಬರಗಾಲದಲ್ಲಿ ಅಧಿಕಮಾಸ, ಪಾಪ!

+++

* ಐಪಿಎಲ್‌ನಲ್ಲಿ ’Knight riders’ಗೆ ಎಂಥಾ ದುರ್ಗತಿ ಬಂತಲ್ಲಾ ಗುರುವೇ!

- Nightನಲ್ಲಿ ಯಾವುದಾದರೂ ವೆಹಿಕಲ್ ride ಮಾಡ್ಕೊಂಡು ಫುಲ್ ಟೀಮು ಎಲ್ಲಿಗಾದರೂ ಓಡಿಹೋಗೋದು ವಾಸಿ, ಅಲ್ವೆ ಶಿಷ್ಯಾ?

+++

* ಛಾಯಾಗ್ರಾಹಕರನ್ನು ಓಡಿಸೋಕಂತ ರೂಪದರ್ಶಿ ಲಿಂಡ್ಸೆ ಲೋಹನ್ ತನ್ನ ಮನೆಮೇಲಿನಿಂದ ಅವರತ್ತ ಮೊಟ್ಟೆ, ಪಿಜ್ಜಾ ಎಸೆದಳಂತೆ!

- ಅವನ್ನು ತಾನೇ ತಿಂದು ಕೆಳಗಿನಿಂದ ಒಂದು ವಾಯುಬಾಣ ಬಿಟ್ಟಿದ್ದರೆ ಛಾಯಾಗ್ರಾಹಕರೆಲ್ಲ ಒಂದೇ ಉಸಿರಿಗೆ ಮೂಗು ಮುಚ್ಚಿಕೊಂಡು ಪರಾರಿಯಾಗ್ತಿದ್ದರು!

+++

* ಇಡೀ ರಾತ್ರಿ ನಿದ್ದೆಮಾಡೋಕಾಗೋಲ್ಲ; ಮನೆ ಹೊರಗಡೆ ಬೀದಿನಾಯಿ ಗಟ್ಟಿಯಾಗಿ ಬೊಗಳ್ತಾ ಇರುತ್ತೆ!

- ಇಡೀ ರಾತ್ರಿ ನಿದ್ದೆಮಾಡ್ತೀಯಾ? ಎಂಥಾ ಅರಸಿಕ ನೀನು!

+++

* ಎಲ್ಲಾ ಬೋಗಸ್ ಪ್ರಶ್ನೆಗಳನ್ನೇ ಹಾಕ್ಕೊಳ್ತೀಯಲ್ಲಾ!

- ಸದ್ಯ! ಬೋಗಸ್ ಉತ್ತರ ಅನ್ನಲಿಲ್ಲವಲ್ಲಾ, ನಾನು ಬಚಾವು!

--೦--

2 ಕಾಮೆಂಟ್‌ಗಳು: