ಗುರುವಾರ, ಮೇ 7, 2009

ಪ್ರಧಾನಿ ಪ್ರಸಂಗ

ರಾಹುಲ್ ಗಾಂಧಿಗೆ ಸಿಕ್ಕಿತು ಎಂದರೆ ಪೀಯೆಮ್ಮಿನ ಪಟ್ಟ
ರಾಹು-ಕೇತುಗಳು ಪಕ್ಕದಿ ಬರುವುವು ಆಗ ಅವನು ಕೆಟ್ಟ!
ಮತ್ತೇನಾದರು ಮನಮೋಹನನೇ ಆದರೆ ಪ್ರಧಾನಿಯು
ಕತ್ತೆಯಂತೇನೊ ದುಡಿವನು ಆದರೆ ಬಹಳೇ ನಿಧಾನಿಯು!

ಅದ್ವಾನಿಯು ಆದರು ಎಂದರೆ ಭಾರತದ ಪ್ರಧಾನ್ಮಂತ್ರಿ
ಅಧ್ವಾನವು ದೇಶವು ಭಾರತಕಾಗೆಂಥಾ ಗತಿ ಬಂತ್ರೀ!
ಕಾಂಗ್ರೆಸ್-ಕಮ್ಯುನಿಸ್ಟ್ ಹೀಗನ್ನುವುದು, ನಾನಂದದ್ದಲ್ರೀ
ಟಾಂಗ್ ಕೊಡುವುದೆ ಚಟ, ದೇಶದ ಯೋಚನೆ ಇವುಗಳಿಗೇನಿಲ್ರೀ!

ಮೂರನೆ ರಂಗವೊ ನಾಲ್ಕನೆ ಮಂಗವೊ ಆದರೆ ಪೀಯೆಮ್ಮು
ಮಾರನೆ ದಿನವೇ ಭರ್ಜರಿ ಸೀನು, ಫೈಟಿಂಗ್ ಏಕ್‌ದಮ್ಮು!
ಕರಟ್, ಮುಲಾಯಂ, ಪಾಸ್ವಾನ್, ಮಾಯಾ, ದೇವೇಗೌಡ, ಜಯಾ,
ಶರದ್, ಲಾಲುಗಳ ಶೀತಲ ಸಮರದಿ ದೇಶದ ಹಿತ ಮಾಯ!

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ