ಶುಕ್ರವಾರ, ಮಾರ್ಚ್ 20, 2009

ವರುಣೋದಯ ಗೀ-ತೆಗಳು

-೧-
ವರುಣನ ಅವಕೃಪೆಗೆ ತುತ್ತಾದರೆ
ರೈತ ಪಾಪರ್.
ಪಕ್ಷದ ಅವಕೃಪೆಗೆ ತುತ್ತಾದರೆ
ವರುಣ ಪಾಪ-ರ್.

***

-೨-
ಕೈ ಕತ್ತರಿಸಬೇಕೆಂದು
ನಾನಂದಿದ್ದು
ಆ ಪಕ್ಷದ ಚಿಹ್ನೆ ’ಕೈ’ಯನ್ನು
ಅಂದನಂತೆ
ವರುಣ್ ಗಾಂಧಿ.

’ಸರಿ,
ಮತಯಂತ್ರದಲ್ಲಿ
ಆ ಚಿಹ್ನೆಯ ಮುಂದೆ
ಕತ್ತರಿ
ಮಾರ್ಕ್‌
ಒತ್ತಿರಿ’
ಅಂದನಂತೆ
ರಾಹುಲ್ ಗಾಂಧಿ.

ಯಾರು ಚತುರರು ನಿಮಗೆ
ಈ ಈರ್ವರೊಳಗೆ?

(ಈ ಅಂಬೋಣಗಳು ಗುಳಿಗೆಪ್ಪನವರಿಗೆ ಮಾತ್ರ ತಲುಪಿದ ಎಕ್ಸ್ಕ್ಲೂಸಿವ್ ರಿಪೋರ್ಟ್. ಆದ್ದರಿಂದ ಈ ವರದಿ ’ಗುಳಿಗೆ’ಯಲ್ಲಿ ಮಾತ್ರ.) (ಇದು ಗುಳಿಗೆಯಲ್ಲಿ ಮಾತ್ರೆ! ಅರ್ಥವಾಗಬೇಕಾದರೆ ಇಂದಿನ ’.....’ ಪತ್ರಿಕೆ ನೋಡಿ.)

***

-೩-
’ತಲೆ ತೆಗಿ, ಕೈ ತೆಗಿ’, ಅಂದರೇನಂತೆ,
’ಸಾವಿನ ವ್ಯಾಪಾರಿ’, ಅಂದರೇನಂತೆ;
ಮನಗಳನ್ನೂ ಮಾನವನ್ನೂ ಕೊಂದರೇನಂತೆ,
ಜನನಾಯಕರಾಗಿ ಇವರೇ
ಲೋಕಸಭೆಯಲ್ಲಿ ಸೇರುವರು ಸಂತೆ!

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ