* ಮತ ಎಣಿಕೆಯ ದಿನವಾದ ಇದೇ ದಿನಾಂಕ 16 ಹಿಂದು ತಿಥಿ ಪ್ರಕಾರ ’ಶ್ರೀರಾಮ ಪಟ್ಟಾಭಿಷೇಕ’ದ ದಿನ.
- ಅದಕ್ಕೇ ಅಡ್ವಾಣಿ, ’history repeats’, ಅಂತ ಕನಸು ಕಾಣುತ್ತಿದ್ದಾರೆ!
+++
* ವರುಣ್ ಗಾಂಧಿ ಪ್ರಧಾನಿಯಾದರೆ ದೇಶದಲ್ಲಿ ಕುಟುಂಬಯೋಜನೆ ಕಡ್ಡಾಯವಂತೆ?
- ಹೌದು. ರಾಹುಲ್ ಗಾಂಧಿ ಪ್ರಧಾನಿಯಾದರೆ (ಸ್ವ)ಕುಟುಂಬ ಕಲ್ಯಾಣ ಕಡ್ಡಾಯ.
ಮನಮೋಹನ್ ಸಿಂಗ್ ಪ್ರಧಾನಿಯಾದರೆ ಅವರಿಗೆ ಈ ದೇಶಕ್ಕಿಂತ ಸೋನಿಯಾ ಮೇಡಂ ಆದೇಶ ಕಡ್ಡಾಯ.
ಅಡ್ವಾಣಿ ಪ್ರಧಾನಿಯಾದರೆ ದೇಶಾದ್ಯಂತ ಪ್ರತಿನಿತ್ಯ ರಾಮ(ಮಂದಿರ)ಭಜನೆ ಕಡ್ಡಾಯ.
ಮೋದಿ ಪ್ರಧಾನಿಯಾದರೆ ದೇಶದ ಎಲ್ಲೆಡೆ (ಮಾತಿನ) ಮೋಡಿ ಪ್ರದರ್ಶನ ಕಡ್ಡಾಯ.
ಲಾಲೂ ಪ್ರಧಾನಿಯಾದರೆ ಭ್ರಷ್ಟಾಚಾರ ಕಡ್ಡಾಯ.
ಪಾಸ್ವಾನ್ ಪ್ರಧಾನಿಯಾದರೆ ಬಿಹಾರಿಗಳಿಗೆ ರೈಲ್ವೆ ಫ್ರೀ ಪಾಸ್ ಕಡ್ಡಾಯ.
ಮಾಯಾವತಿ ಪ್ರಧಾನಿಯಾದರೆ ದೇಶಾದ್ಯಂತ ತನ್ನ ಬರ್ತ್ಡೇ (with gifts) ಕಡ್ಡಾಯ. (ಕಜ್ಜಾಯ.)
ಮುಲಾಯಂ ಪ್ರಧಾನಿಯಾದರೆ ಗೂಂಡಾಗಿರಿ ಕಡ್ಡಾಯ.
ಪವಾರ್ ಪ್ರಧಾನಿಯಾದರೆ ಮಗಳು ಸುಪ್ರಿಯಾಗೆ ಮಂತ್ರಿಗಿರಿ ಕಡ್ಡಾಯ.
ಕರಟ್ ಪ್ರಧಾನಿಯಾದರೆ ಜನರ ಕೈಗೆ ಕರಟ ಕಡ್ಡಾಯ.
ದೇವೇಗೌಡರು ಪ್ರಧಾನಿಯಾದರೆ ದೇಶಾದ್ಯಂತ ರಾಗಿಮುದ್ದೆ ಊಟ ಕಡ್ಡಾಯ.
+++
* ’ಪ್ರಜಾರಾಜ್ಯಂ’ ಪಕ್ಷ ಹೀನಾಯವಾಗಿ ಸೋತರೆ?
- ಆಗ ಪಕ್ಷದ ಹೆಸರನ್ನು ’ವಜಾರಾಜ್ಯಂ’ ಎಂದು ಬದಲಾಯಿಸಲಾಗುವುದು.
+++
* ಕ್ರಿಕೆಟ್ನಲ್ಲಿ ಜೀವಮಾನದ ನಿಷೇಧ; ಆದರೆ ಲೋಕಸಭೆಗೆ ಸ್ಪರ್ಧಿಸಬಹುದೇ?!
- ಲೋಕಸಭೆಯು ಈ ದೇಶಕ್ಕೆ ಕ್ರಿಕೆಟ್ನಷ್ಟು ಮುಖ್ಯ ಅಲ್ಲವಲ್ಲಾ, ಆದ್ದರಿಂದ ಸ್ಪರ್ಧಿಸಬಹುದು.
+++
* ಕೋಡಿಮಠದ ಸ್ವಾಮೀಜಿ ಹೇಳಿದ ಭವಿಷ್ಯ ನಿಜವಾಗುತ್ತೆಯೆ?
- ಒಂದು ಪ್ರಶ್ನೆಗೆ ಸ್ವಾಮೀಜಿ ರೂ.3000 ತಗೋತಾರೆ. ನನಗೆ ರೂ.6000 ಕೊಡಿ, ಉತ್ತರ ಹೇಳ್ತೀನಿ.
+++
* ’ಅಡ್ವಾಣಿಗೆ ಪ್ರಧಾನಿಯಾಗುವ ಯೋಗ ಇಲ್ಲ’, ಅಂತಾರೆ ಕೋಡಿಮಠದ ಸ್ವಾಮೀಜಿ!
- ಆ ಸ್ವಾಮೀಜಿಯನ್ನು ಭೆಟ್ಟಿಯಾಗಿ ಆಶೀರ್ವಾದ ಪಡೆದರೆ ಯೋಗ ಒದಗಿಬರಬಹುದು.
+++
* ಕೋಡಿಮಠದ ಭವಿಷ್ಯವಾಣಿ ಪ್ರಕಾರ ನೂತನ ಕೇಂದ್ರ ಸರ್ಕಾರದ ಆಡಳಿತ ಕೇವಲ ಎರಡೇ ವರ್ಷ!
- ಅನಂತರ ಕೋಡಿಮಠದ ಆಡಳಿತ.
+++
* ಇಲ್ಲೊಬ್ಬ, ’ಹುಚ್ಚುಖೋಡಿಮಠ’, ಅಂತಾನೆ!
- ಅಯ್ಯೋ, ಅವನಿಗೆ ಸುಮ್ಮನಿರೋಕೆ ಹೇಳಿ. ಇಲ್ಲದಿದ್ದರೆ ಸ್ವಾಮೀಜಿ ಅವನ ಭವಿಷ್ಯ ಹೇಳಿಬಿಡ್ತಾರೆ!
+++
* ’ಸಂಸ್ಕೃತದಿಂದ ಮಾತ್ರ ಸುಸಂಸ್ಕೃತ ಸಮಾಜದ ನಿರ್ಮಾಣ ಸಾಧ್ಯ’, ಅಂದಿದ್ದಾರೆ ಪೇಜಾವರ ಶ್ರೀಗಳು.
- ಮಠದ ಸಂಸ್ಕೃತವೋ, ಪೋಲೀಸ್ ಇಲಾಖೆಯ ಸಂಸ್ಕೃತವೋ ಗೊತ್ತಾಗಲಿಲ್ಲ.
+++
* ’ಉದ್ಯಾನ ನಗರಿ’ ಬೆಂಗಳೂರಿನ ಮರಗಳೆಲ್ಲ ಹೋದರೆ ಗತಿ?
- ಚಿಂತೆ ಬೇಡ, ಆಗ ಬೆಂಗಳೂರು ಆಗುತ್ತೆ ’ಅಮರಾವತಿ’!
+++
* ವನವಾಸಕ್ಕೆ ಹೋಗ್ತೀರಂತೆ?
- ಪತ್ರಿಕಾಗೋಷ್ಠೀಲಿ ನಾನು ಈ ಮಾತನ್ನು off the record ಹೇಳಿದ್ದು. ಆದ್ದರಿಂದ ನಾನು ಈ ಮಾತನ್ನು ಹೇಳಿಯೇ ಇಲ್ಲ.
+++
* ’ನೀವು ಕೇಳದಿರಿ’ಗೆ ಹತ್ತು.
- ಎಲೆ ಮುದುರೆತ್ತು.
--0--
ಲಾಲೂ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಲಾಲೂ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಮಂಗಳವಾರ, ಮೇ 12, 2009
ಗುರುವಾರ, ಮೇ 7, 2009
ನೀವು ಕೇಳದಿರಿ - 5
* ಶ್ರುತಿ-ಮಹೇಂದರ್ ವಿರಸವಂತೆ?
- ಹೌದು. ಶ್ರುತಿಯ ಸರಸ ಸಂಗೀತದಲ್ಲಿ ಈಗ ವಿರಸದ ಅಪಶ್ರುತಿ ಮೂಡಿದೆ. ನಿನ್ನೆವರೆಗೂ ಇಂದ್ರ-ಚಂದ್ರ-ಮಹೇಂದ್ರ; ಈಗ, ’ಆ ಮಹೇಂದ್ರ ಯಾವ ಮಹಾ ಇಂದ್ರ?’
+++
* ಐಪಿಎಲ್ ಮ್ಯಾಚ್ ನೋಡೋಕೆ ಸ್ಟೇಡಿಯಂನಲ್ಲಿ ಜನರೇ ಇಲ್ಲವಂತೆ!
- ಮ್ಯಾಚ್ ಇಲ್ಲಿ ಅಲ್ಲ, ಆದ್ದರಿಂದ ಜನ ಅಲ್ಲಿ ಇಲ್ಲ.
(ಲಲಿತ್ ಮೋದಿಯೇ ಕಾರಣ ಬಲ್ಲ. ಆತನ ಸೊಕ್ಕಿನ ಫಲವೇ ಎಲ್ಲ!)
+++
* ಒಬಾಮಾ ನಿರ್ಧಾರದಿಂದ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನ ಗತಿ ಏನು ಗುರುವೇ?
- ’ವಿದ್ಯುನ್ಮಾನ ನಗರ’ ಇದುವರೆಗೆ ’ವಿದ್ಯುನ್ಮಾದ ನಗರ’ ಆಗಿತ್ತು, ಇನ್ನುಮೇಲೆ ಅದು ’ವಿದ್ಯುನ್ಮೌನ ನಗರ’!
+++
* ನೇಪಾಳದಲ್ಲಿ ಮುಂದೇನಾಗಬಹುದು?
- ಇದುವರೆಗೆ ಪ್ರಚಂಡನ ಸರ್ಕಾರ ಇತ್ತು, ಇನ್ನು ಪ್ರಚಂಡ ಸರ್ಕಾರ ಬರಲಿದೆ!
+++
* ಚಲನಚಿತ್ರ ನಟಿಯರ ಬಗ್ಗೆ ಮಾತಾಡುವಾಗ ಯಾವಾಗಲೂ ಏಕವಚನವನ್ನೇ ಬಳಸುತ್ತೇವಲ್ಲಾ, ಯಾಕೆ?
- ಯಾಕೆಂದರೆ, ಅವರಿಗೆ ಎಂದಿಗೂ ವಯಸ್ಸಾಗೋದೇ ಇಲ್ವಲ್ಲಾ, ಅದಕ್ಕೆ.
+++
* ಇವತ್ತು ಲಾಲೂ ಕ್ಷೇತ್ರದಲ್ಲಿ ಮತದಾನ. ಲಾಲೂ ಗೆಲ್ಲಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ.
- "ತುಮ್ಕೋ ಇಂಡ್ಯನ್ ರೈಲ್ವೆ ಕಾ ಫ್ರೀ ಪಾಸ್ ಸ್ಯಾಂಕ್ಷನ್."
+++
* ಮುಂದಿನ ಪ್ರಧಾನಿ ಯಾರಾಗಬಹುದು ಗುರುವೆ?
- ಗಂಡಸು ಅಥವಾ ಹೆಂಗಸು ಆಗಬಹುದು.
--೦--
- ಹೌದು. ಶ್ರುತಿಯ ಸರಸ ಸಂಗೀತದಲ್ಲಿ ಈಗ ವಿರಸದ ಅಪಶ್ರುತಿ ಮೂಡಿದೆ. ನಿನ್ನೆವರೆಗೂ ಇಂದ್ರ-ಚಂದ್ರ-ಮಹೇಂದ್ರ; ಈಗ, ’ಆ ಮಹೇಂದ್ರ ಯಾವ ಮಹಾ ಇಂದ್ರ?’
+++
* ಐಪಿಎಲ್ ಮ್ಯಾಚ್ ನೋಡೋಕೆ ಸ್ಟೇಡಿಯಂನಲ್ಲಿ ಜನರೇ ಇಲ್ಲವಂತೆ!
- ಮ್ಯಾಚ್ ಇಲ್ಲಿ ಅಲ್ಲ, ಆದ್ದರಿಂದ ಜನ ಅಲ್ಲಿ ಇಲ್ಲ.
(ಲಲಿತ್ ಮೋದಿಯೇ ಕಾರಣ ಬಲ್ಲ. ಆತನ ಸೊಕ್ಕಿನ ಫಲವೇ ಎಲ್ಲ!)
+++
* ಒಬಾಮಾ ನಿರ್ಧಾರದಿಂದ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನ ಗತಿ ಏನು ಗುರುವೇ?
- ’ವಿದ್ಯುನ್ಮಾನ ನಗರ’ ಇದುವರೆಗೆ ’ವಿದ್ಯುನ್ಮಾದ ನಗರ’ ಆಗಿತ್ತು, ಇನ್ನುಮೇಲೆ ಅದು ’ವಿದ್ಯುನ್ಮೌನ ನಗರ’!
+++
* ನೇಪಾಳದಲ್ಲಿ ಮುಂದೇನಾಗಬಹುದು?
- ಇದುವರೆಗೆ ಪ್ರಚಂಡನ ಸರ್ಕಾರ ಇತ್ತು, ಇನ್ನು ಪ್ರಚಂಡ ಸರ್ಕಾರ ಬರಲಿದೆ!
+++
* ಚಲನಚಿತ್ರ ನಟಿಯರ ಬಗ್ಗೆ ಮಾತಾಡುವಾಗ ಯಾವಾಗಲೂ ಏಕವಚನವನ್ನೇ ಬಳಸುತ್ತೇವಲ್ಲಾ, ಯಾಕೆ?
- ಯಾಕೆಂದರೆ, ಅವರಿಗೆ ಎಂದಿಗೂ ವಯಸ್ಸಾಗೋದೇ ಇಲ್ವಲ್ಲಾ, ಅದಕ್ಕೆ.
+++
* ಇವತ್ತು ಲಾಲೂ ಕ್ಷೇತ್ರದಲ್ಲಿ ಮತದಾನ. ಲಾಲೂ ಗೆಲ್ಲಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ.
- "ತುಮ್ಕೋ ಇಂಡ್ಯನ್ ರೈಲ್ವೆ ಕಾ ಫ್ರೀ ಪಾಸ್ ಸ್ಯಾಂಕ್ಷನ್."
+++
* ಮುಂದಿನ ಪ್ರಧಾನಿ ಯಾರಾಗಬಹುದು ಗುರುವೆ?
- ಗಂಡಸು ಅಥವಾ ಹೆಂಗಸು ಆಗಬಹುದು.
--೦--
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)