ರಾಹುಲ್ ಗಾಂಧಿಗೆ ಸಿಕ್ಕಿತು ಎಂದರೆ ಪೀಯೆಮ್ಮಿನ ಪಟ್ಟ
ರಾಹು-ಕೇತುಗಳು ಪಕ್ಕದಿ ಬರುವುವು ಆಗ ಅವನು ಕೆಟ್ಟ!
ಮತ್ತೇನಾದರು ಮನಮೋಹನನೇ ಆದರೆ ಪ್ರಧಾನಿಯು
ಕತ್ತೆಯಂತೇನೊ ದುಡಿವನು ಆದರೆ ಬಹಳೇ ನಿಧಾನಿಯು!
ಅದ್ವಾನಿಯು ಆದರು ಎಂದರೆ ಭಾರತದ ಪ್ರಧಾನ್ಮಂತ್ರಿ
ಅಧ್ವಾನವು ದೇಶವು ಭಾರತಕಾಗೆಂಥಾ ಗತಿ ಬಂತ್ರೀ!
ಕಾಂಗ್ರೆಸ್-ಕಮ್ಯುನಿಸ್ಟ್ ಹೀಗನ್ನುವುದು, ನಾನಂದದ್ದಲ್ರೀ
ಟಾಂಗ್ ಕೊಡುವುದೆ ಚಟ, ದೇಶದ ಯೋಚನೆ ಇವುಗಳಿಗೇನಿಲ್ರೀ!
ಮೂರನೆ ರಂಗವೊ ನಾಲ್ಕನೆ ಮಂಗವೊ ಆದರೆ ಪೀಯೆಮ್ಮು
ಮಾರನೆ ದಿನವೇ ಭರ್ಜರಿ ಸೀನು, ಫೈಟಿಂಗ್ ಏಕ್ದಮ್ಮು!
ಕರಟ್, ಮುಲಾಯಂ, ಪಾಸ್ವಾನ್, ಮಾಯಾ, ದೇವೇಗೌಡ, ಜಯಾ,
ಶರದ್, ಲಾಲುಗಳ ಶೀತಲ ಸಮರದಿ ದೇಶದ ಹಿತ ಮಾಯ!
congress ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
congress ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಗುರುವಾರ, ಮೇ 7, 2009
ಭಾನುವಾರ, ಮೇ 3, 2009
ನೀವು ಕೇಳದಿರಿ - 3
* ಕರ್ನಾಟಕದಲ್ಲಿ ಮತದಾನ ಮುಗಿದರೂ ಪಕ್ಷಗಳ ಪರಸ್ಪರ ಕೆಸರೆರಚಾಟ ನಿಂತಿಲ್ಲವಲ್ಲ ಗುರುವೇ!
- ಎಲ್ಲರ ಬಳಿಯೂ ಆ ಪಾಟಿ ಕೆಸರಿದೆಯಲ್ಲಾ, ಅದನ್ನು ಹೇಳು ಶಿಷ್ಯಾ!
+++
* ಪಕ್ಷಗಳ ಕೆಸರೆರಚಾಟದ ಬಗ್ಗೆ ರವಷ್ಟು ಕಮೆಂಟ್ ಮಾಡಿ ಗುರುವೇ.
- ಓಕೆ ಶಿಷ್ಯಾ, ಕೇಳು.
’ಕೈ ಕೆಸರಾದರೆ ಬಾಯ್ ಮೊಸರು’, ಎಂದು ನಂಬಿ ಕಾಂಗ್ರೆಸ್ ’ಕೈ’ ಕೆಸರು ಮಾಡಿಕೊಳ್ಳುತ್ತಿದೆ.
ಜೆಡಿಎಸ್ ಪಿತಮಹಾಶಯ ಸ್ವಯಂ ಕೆಸರಿನ (ಮಣ್ಣಿನ) ಮಗ.
ಇನ್ನು ಬಿಜೆಪಿ; ಅದು ’ಕೆಸರಿನ ಕಮಲ’. ಕೆಸರಿದ್ದರೇನೇ ಕೇಸರಿಗೆ ಖುಷಿ (ಸದಾ ಆನಂದ).
ಹೀಗಿರುವಾಗ ಸದರಿ ಕೆಸರೆರಚಾಟದಲ್ಲಿ ವಿಶೇಷವೇನಿಲ್ಲ.
ನಮ್ಮೀ ಪಕ್ಷಗಳಿಗೆ ಗೊತ್ತಿರುವುದು ಎರಡೇ. ಕೆಸರಾಟ ಮತ್ತು ಕೊಸರಾಟ. ಏನಂತೀ ಶಿಷ್ಯಾ?
+++
* ಸ್ವಿಸ್ ಬ್ಯಾಂಕ್ ಹಣ ಭಾರತಕ್ಕೆ ಬರುತ್ತೆಯೆ?
- ಬರುತ್ತೆ, ಬರುತ್ತೆ; ಮತದಾನದ ಅಂತಿಮ ದಿನವಾದ ಮೇ ೧೩ರ ತನಕ ಬರ್ತಾನೇ ಇರುತ್ತೆ.
+++
* ಮುಷ್ಕರನಿರತ ಕಿರಿಯ ವೈದ್ಯರಿಗೆ ಏನಾಗಬೇಕು?
- ಕಿರಿ ವೈದ್ಯರು ಕಿರಿಕಿರಿ ವೈದ್ಯರಾಗದಿದ್ದರೆ ಸಾಕು.
+++
* ಕಸಬ್ ಏನೇನೋ ಡಿಮಾಂಡ್ ಮಾಡ್ತಿದ್ದಾನೆ!
- ಬೇರೆ ಕಸಬಿಲ್ಲ, ಇನ್ನೇನ್ಮಾಡ್ತಾನೆ?
+++
* ಪ್ರಪಂಚದಲ್ಲೇ ಅತೀ ಸುಂದರರು ಯಾರು?
- ಅಧಿಕಾರದ ಅಥವಾ ಜನಪ್ರಿಯತೆಯ ನಂಟುಳ್ಳವರು.
ಉದಾ: ಮಿಷೆಲ್ ಒಬಾಮಾ, ಫ್ರೀಡಾ ಪಿಂಟೊ, ದೇವ್ ಪಟೇಲ್....
+++
* ವಿಶ್ವಶಾಂತಿಗೆ ಯಾವಯಾವ ಹೋಮ ಮಾಡುತ್ತಾರೆ?
- ಸದ್ಯಕ್ಕೆ ಹಂದಿಗಳ ಮಾರಣಹೋಮ ಮಾಡುತ್ತಿದ್ದಾರೆ.
--೦--
- ಎಲ್ಲರ ಬಳಿಯೂ ಆ ಪಾಟಿ ಕೆಸರಿದೆಯಲ್ಲಾ, ಅದನ್ನು ಹೇಳು ಶಿಷ್ಯಾ!
+++
* ಪಕ್ಷಗಳ ಕೆಸರೆರಚಾಟದ ಬಗ್ಗೆ ರವಷ್ಟು ಕಮೆಂಟ್ ಮಾಡಿ ಗುರುವೇ.
- ಓಕೆ ಶಿಷ್ಯಾ, ಕೇಳು.
’ಕೈ ಕೆಸರಾದರೆ ಬಾಯ್ ಮೊಸರು’, ಎಂದು ನಂಬಿ ಕಾಂಗ್ರೆಸ್ ’ಕೈ’ ಕೆಸರು ಮಾಡಿಕೊಳ್ಳುತ್ತಿದೆ.
ಜೆಡಿಎಸ್ ಪಿತಮಹಾಶಯ ಸ್ವಯಂ ಕೆಸರಿನ (ಮಣ್ಣಿನ) ಮಗ.
ಇನ್ನು ಬಿಜೆಪಿ; ಅದು ’ಕೆಸರಿನ ಕಮಲ’. ಕೆಸರಿದ್ದರೇನೇ ಕೇಸರಿಗೆ ಖುಷಿ (ಸದಾ ಆನಂದ).
ಹೀಗಿರುವಾಗ ಸದರಿ ಕೆಸರೆರಚಾಟದಲ್ಲಿ ವಿಶೇಷವೇನಿಲ್ಲ.
ನಮ್ಮೀ ಪಕ್ಷಗಳಿಗೆ ಗೊತ್ತಿರುವುದು ಎರಡೇ. ಕೆಸರಾಟ ಮತ್ತು ಕೊಸರಾಟ. ಏನಂತೀ ಶಿಷ್ಯಾ?
+++
* ಸ್ವಿಸ್ ಬ್ಯಾಂಕ್ ಹಣ ಭಾರತಕ್ಕೆ ಬರುತ್ತೆಯೆ?
- ಬರುತ್ತೆ, ಬರುತ್ತೆ; ಮತದಾನದ ಅಂತಿಮ ದಿನವಾದ ಮೇ ೧೩ರ ತನಕ ಬರ್ತಾನೇ ಇರುತ್ತೆ.
+++
* ಮುಷ್ಕರನಿರತ ಕಿರಿಯ ವೈದ್ಯರಿಗೆ ಏನಾಗಬೇಕು?
- ಕಿರಿ ವೈದ್ಯರು ಕಿರಿಕಿರಿ ವೈದ್ಯರಾಗದಿದ್ದರೆ ಸಾಕು.
+++
* ಕಸಬ್ ಏನೇನೋ ಡಿಮಾಂಡ್ ಮಾಡ್ತಿದ್ದಾನೆ!
- ಬೇರೆ ಕಸಬಿಲ್ಲ, ಇನ್ನೇನ್ಮಾಡ್ತಾನೆ?
+++
* ಪ್ರಪಂಚದಲ್ಲೇ ಅತೀ ಸುಂದರರು ಯಾರು?
- ಅಧಿಕಾರದ ಅಥವಾ ಜನಪ್ರಿಯತೆಯ ನಂಟುಳ್ಳವರು.
ಉದಾ: ಮಿಷೆಲ್ ಒಬಾಮಾ, ಫ್ರೀಡಾ ಪಿಂಟೊ, ದೇವ್ ಪಟೇಲ್....
+++
* ವಿಶ್ವಶಾಂತಿಗೆ ಯಾವಯಾವ ಹೋಮ ಮಾಡುತ್ತಾರೆ?
- ಸದ್ಯಕ್ಕೆ ಹಂದಿಗಳ ಮಾರಣಹೋಮ ಮಾಡುತ್ತಿದ್ದಾರೆ.
--೦--
ಬೆರಳ್ನ ತಿರುಳ್
ಲೋಕಸಭಾ ಚುನಾವಣೆಯ ಮತದಾನದ ಗುರುತಿನ ಶಾಯಿಯನ್ನು ಕೆಲ ಗಣ್ಯರು ಬೇರೆ ಬೆರಳುಗಳಿಗೆ ಹಚ್ಚಿಸಿಕೊಂಡದ್ದಕ್ಕೆ ಕಾರಣಗಳನ್ನು ಈ ಕೆಳಗೆ ಬಯಲುಗೊಳಿಸಲಾಗಿದೆ.
ಬಲಪಂಥೀಯ ಯಡಿಯೂರಪ್ಪನವರು ಪಕ್ಷದ ಬಲವರ್ಧನೆಗಾಗಿ ಬಲಮುರಿ ಗಣಪತಿ ದೇವಸ್ಥಾನದ ಅರ್ಚಕರ ಸಲಹೆಯಂತೆ ಹಾಗೂ ತಮ್ಮ ಬಲಗೈ ಬಂಟ ಮುಜರಾ(ಯಿ) ಸಚಿವ ಕೃಷ್ಣಯ್ಯ ಶೆಟ್ಟರ ಸೂಚನೆಯಂತೆ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿದ್ದಾರೆ. ತಮ್ಮ ಹೆಸರನ್ನು ಹಲವರು ’ಎಡ’ಯೂರಪ್ಪ ಎಂದು ಉಚ್ಚರಿಸುವುದರಿಂದ ಅದನ್ನು ’ಬಲ’ಯೂರಪ್ಪ ಎಂದು ಬದಲಿಸಿಕೊಳ್ಳುವ ಆಲೋಚನೆಯೂ ಮಾನ್ಯ ಮುಖ್ಯಮಂತ್ರಿಗಳಿಗಿದೆಯಂತೆ. ಅವರ ಸುಪುತ್ರ ರಾಘವೇಂದ್ರ ಮಾತ್ರ ಮಾಡರ್ನ್ ಗೈ ಆಗಿರುವುದರಿಂದ ಎಡಗೈ ಬೆರಳಿಗೇ ಶಾಯಿ ಹಚ್ಚಿಸಿಕೊಂಡಿದ್ದಾನೆ.
ಅಮಿತಾಭ್ ಬಚ್ಚನ್ನ ಪೂರಾ ಕುಟುಂಬವೇ ತೋರು ಬೆರಳಿನ ಬದಲು ಮಧ್ಯಬೆರಳಿಗೆ ಶಾಯಿ ಹಚ್ಚಿಸಿಕೊಂಡಿದೆ. ಏಕೆಂದರೆ, ಆ ಕುಟುಂಬವು ಸದಾ ’ಸೆಂಟರ್’ ಆಫ್ ಅಟ್ರ್ಯಾಕ್ಷನ್ ಆಗಿರಬಯಸುತ್ತದೆ.
’ನಾನೇನು ಕಮ್ಮಿ? ನಾನೂ ಅಷ್ಟೇಯ’, ಎಂದು ಅಮೀರ್ ಖಾನ್ ಕೂಡ ’ಸೆಂಟರ್’ ಫಿಂಗರಿಗೆ ಶಾಯಿ ಹಚ್ಚಿಸಿಕೊಂಡಿದ್ದಾನೆ.
(ಬಚ್ಚನ್ ಕುಟುಂಬವು ಕ್ಯಾಮೆರಾಗಳಿಗೆ ಮಧ್ಯಬೆರಳನ್ನು ಚಾಚಿ ತೋರಿಸುತ್ತಿರುವ ಚಿತ್ರವನ್ನು ಪತ್ರಿಕೆಗಳಲ್ಲಿ ಕಂಡು ಅಮೆರಿಕದ ಕೆಲ ಎನ್ನಾರೈ ಸಂಘಟನೆಗಳು ’ಛೀಛೀ’ ಎಂದು ಅಸಹ್ಯಪಟ್ಟುಕೊಂಡಿವೆಯೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.)
ಈ ನಡುವೆ, ಬಲಪಂಥೀಯ ಅಡ್ವಾಣಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಸಾರಾಭಾಯ್ ಕೂಡ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮಲ್ಲಿಕಾ ಅವರು ’ಆಪರೇಷನ್ ಕಮಲ’ಕ್ಕೆ ಬಲಿಯಾಗಲಿದ್ದಾರೆಯೇ ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ಹುಟ್ಟಿಕೊಂಡಿದೆ. ಆದರೆ, ಮಲ್ಲಿಕಾ ಅವರ ಪುತ್ರಿ ಅನಾಹಿತಾ, ’ಹಾಗೇನಿಲ್ಲ, ನಮ್ಮಮ್ಮ ಕೂಚಿಪುಡಿ-ಭರತನಾಟ್ಯಗಳಲ್ಲೇ ಜೀವನ ಕಳೆದದ್ದರಿಂದ ಅವರಿಗೆ ಯಾವ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ, ಹಾಗಾಗಿ ಪರಪಾಟಾಯಿತು, ಅಷ್ಟೆ’, ಎಂದು ಪತ್ರಿಕಾ ಹೇಳಿಕೆ ನೀಡುವ ಮೂಲಕ ವಿಷಯವನ್ನು ತಿಳಿಗೊಳಿಸಲೆತ್ನಿಸಿದ್ದಾರೆ.
ಎಲ್ಲರಿಗಿಂತ ಬುದ್ಧಿವಂತರೆಂದರೆ ನರೇಂದ್ರ ಮೋದಿ. ಮಾಧ್ಯಮಗಳ ಕ್ಯಾಮೆರಾಗಳಿಗೆ ಶಾಯಿಯ ಬೆರಳನ್ನು ತೋರಿಸುವ ನೆಪದಲ್ಲಿ ಮೋದಿಯು ಪಕ್ಕದ ಬೆರಳನ್ನೂ ಜೊತೆಗೆ ಚಾಚಿ ವಿಜಯದ ಸಂಕೇತವನ್ನೂ (ಹಿಂದುಮುಂದಾಗಿ) ಬೀರಿಬಿಟ್ಟಿದ್ದಾರೆ! ಫಲಿತಾಂಶಕ್ಕೆ ಮುನ್ನವೇ ಜನರನ್ನು ಈ ರೀತಿ ಮೋಡಿ ಮಾಡಲೆತ್ನಿಸುವ ಮೋದಿಯ ಮಿದುಳೆಂದರೆ ಸಾಮಾನ್ಯವೆ?!
ಬಲಪಂಥೀಯ ಯಡಿಯೂರಪ್ಪನವರು ಪಕ್ಷದ ಬಲವರ್ಧನೆಗಾಗಿ ಬಲಮುರಿ ಗಣಪತಿ ದೇವಸ್ಥಾನದ ಅರ್ಚಕರ ಸಲಹೆಯಂತೆ ಹಾಗೂ ತಮ್ಮ ಬಲಗೈ ಬಂಟ ಮುಜರಾ(ಯಿ) ಸಚಿವ ಕೃಷ್ಣಯ್ಯ ಶೆಟ್ಟರ ಸೂಚನೆಯಂತೆ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿದ್ದಾರೆ. ತಮ್ಮ ಹೆಸರನ್ನು ಹಲವರು ’ಎಡ’ಯೂರಪ್ಪ ಎಂದು ಉಚ್ಚರಿಸುವುದರಿಂದ ಅದನ್ನು ’ಬಲ’ಯೂರಪ್ಪ ಎಂದು ಬದಲಿಸಿಕೊಳ್ಳುವ ಆಲೋಚನೆಯೂ ಮಾನ್ಯ ಮುಖ್ಯಮಂತ್ರಿಗಳಿಗಿದೆಯಂತೆ. ಅವರ ಸುಪುತ್ರ ರಾಘವೇಂದ್ರ ಮಾತ್ರ ಮಾಡರ್ನ್ ಗೈ ಆಗಿರುವುದರಿಂದ ಎಡಗೈ ಬೆರಳಿಗೇ ಶಾಯಿ ಹಚ್ಚಿಸಿಕೊಂಡಿದ್ದಾನೆ.
ಅಮಿತಾಭ್ ಬಚ್ಚನ್ನ ಪೂರಾ ಕುಟುಂಬವೇ ತೋರು ಬೆರಳಿನ ಬದಲು ಮಧ್ಯಬೆರಳಿಗೆ ಶಾಯಿ ಹಚ್ಚಿಸಿಕೊಂಡಿದೆ. ಏಕೆಂದರೆ, ಆ ಕುಟುಂಬವು ಸದಾ ’ಸೆಂಟರ್’ ಆಫ್ ಅಟ್ರ್ಯಾಕ್ಷನ್ ಆಗಿರಬಯಸುತ್ತದೆ.
’ನಾನೇನು ಕಮ್ಮಿ? ನಾನೂ ಅಷ್ಟೇಯ’, ಎಂದು ಅಮೀರ್ ಖಾನ್ ಕೂಡ ’ಸೆಂಟರ್’ ಫಿಂಗರಿಗೆ ಶಾಯಿ ಹಚ್ಚಿಸಿಕೊಂಡಿದ್ದಾನೆ.
(ಬಚ್ಚನ್ ಕುಟುಂಬವು ಕ್ಯಾಮೆರಾಗಳಿಗೆ ಮಧ್ಯಬೆರಳನ್ನು ಚಾಚಿ ತೋರಿಸುತ್ತಿರುವ ಚಿತ್ರವನ್ನು ಪತ್ರಿಕೆಗಳಲ್ಲಿ ಕಂಡು ಅಮೆರಿಕದ ಕೆಲ ಎನ್ನಾರೈ ಸಂಘಟನೆಗಳು ’ಛೀಛೀ’ ಎಂದು ಅಸಹ್ಯಪಟ್ಟುಕೊಂಡಿವೆಯೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.)
ಈ ನಡುವೆ, ಬಲಪಂಥೀಯ ಅಡ್ವಾಣಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಸಾರಾಭಾಯ್ ಕೂಡ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮಲ್ಲಿಕಾ ಅವರು ’ಆಪರೇಷನ್ ಕಮಲ’ಕ್ಕೆ ಬಲಿಯಾಗಲಿದ್ದಾರೆಯೇ ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ಹುಟ್ಟಿಕೊಂಡಿದೆ. ಆದರೆ, ಮಲ್ಲಿಕಾ ಅವರ ಪುತ್ರಿ ಅನಾಹಿತಾ, ’ಹಾಗೇನಿಲ್ಲ, ನಮ್ಮಮ್ಮ ಕೂಚಿಪುಡಿ-ಭರತನಾಟ್ಯಗಳಲ್ಲೇ ಜೀವನ ಕಳೆದದ್ದರಿಂದ ಅವರಿಗೆ ಯಾವ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ, ಹಾಗಾಗಿ ಪರಪಾಟಾಯಿತು, ಅಷ್ಟೆ’, ಎಂದು ಪತ್ರಿಕಾ ಹೇಳಿಕೆ ನೀಡುವ ಮೂಲಕ ವಿಷಯವನ್ನು ತಿಳಿಗೊಳಿಸಲೆತ್ನಿಸಿದ್ದಾರೆ.
ಎಲ್ಲರಿಗಿಂತ ಬುದ್ಧಿವಂತರೆಂದರೆ ನರೇಂದ್ರ ಮೋದಿ. ಮಾಧ್ಯಮಗಳ ಕ್ಯಾಮೆರಾಗಳಿಗೆ ಶಾಯಿಯ ಬೆರಳನ್ನು ತೋರಿಸುವ ನೆಪದಲ್ಲಿ ಮೋದಿಯು ಪಕ್ಕದ ಬೆರಳನ್ನೂ ಜೊತೆಗೆ ಚಾಚಿ ವಿಜಯದ ಸಂಕೇತವನ್ನೂ (ಹಿಂದುಮುಂದಾಗಿ) ಬೀರಿಬಿಟ್ಟಿದ್ದಾರೆ! ಫಲಿತಾಂಶಕ್ಕೆ ಮುನ್ನವೇ ಜನರನ್ನು ಈ ರೀತಿ ಮೋಡಿ ಮಾಡಲೆತ್ನಿಸುವ ಮೋದಿಯ ಮಿದುಳೆಂದರೆ ಸಾಮಾನ್ಯವೆ?!
ಬುಧವಾರ, ಮಾರ್ಚ್ 25, 2009
’ಕೈ’-’ಲಾಗ’-ದವರು
ಇವತ್ತಿನ ಪತ್ರಿಕೆಗಳನ್ನು ನೋಡಿದಿರಾ?
’ಕೈ’ ಲಾಗದ ಇಬ್ಬರು ವೃದ್ಧರು ಪರಸ್ಪರ ಅದೇನನ್ನೋ ಹೇಳಲು-ಕೇಳಲು ಒದ್ದಾಡುತ್ತಿರುವ ಫೋಟೋ ಗಮನಿಸಿದಿರಾ?
ಗಾಲಿ ಕುರ್ಚಿ ಬಿಟ್ಟು ಎದ್ದೇಳಲಾರದ ಅರ್ಜುನಸಿಂಗರು, ’ಕಿವಿ ಸ್ವಲ್ಪ ದೂರ’ (pun intended) ಇರುವ ಪ್ರಣವ ಮುಖರ್ಜಿಗೆ ಏನನ್ನೋ ಹೇಳಲು ತಮ್ಮ ಮುಖ ಮುಂದೆಚಾಚಿ ಒದ್ದಾಡುತ್ತಿರುವರು; ಅದನ್ನು ಕೇಳಿಸಿಕೊಳ್ಳಲು ಪ್ರಣವರು ತಮ್ಮ ಕಿವಿಗೆ ಕೈ ಅಡ್ಡ ಇಟ್ಟುಕೊಂಡು ಒದ್ದಾಡುತ್ತಿರುವರು!
ಹಿಂದೆ ಕುಳಿತ ನಮ್ಮ ಬಿ.ಕೆ.ಹರಿಪ್ರಸಾದರು ಇದನ್ನು ನೋಡಿ ಮುಖ ಎತ್ತಿ ನಗುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೊಂದು ಫೋಟೋ ಗಮನಿಸಿದಿರಾ?
ವಯಸ್ಸಾಗಿದ್ದರೂ ತಾನು ನಡೆದಾಡಬಲ್ಲೆ, ತನಗೆ ಚುನಾವಣಾ ಟಿಕೆಟ್ ಬೇಕು, ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಯ ಮನೆಯವರೆಗೆ ಪಾದಯಾತ್ರೆಗೈದು ತೋರಿಸಲು ಬಿಹಾರಕ್ಕೆ ಬಂದಿಳಿದ ಜಾರ್ಜ್ ಫರ್ನಾಂಡಿಸರು ವಿಮಾನ ನಿಲ್ದಾಣದಲ್ಲಿ ದಿಗ್ವಿಜಯಸಿಂಗರ ನೆರವಿನಿಂದ ನಡೆಯುತ್ತಿರುವರು! ನಡೆದಾಡಲೂ ಕಷ್ಟಪಡುವ ಇವರು ತಾನು ಸುದೃಢವಾಗಿರುವೆನೆಂದು ತೋರಿಸಿಕೊಳ್ಳಲು ’ಲಾಗ’ಹಾಕುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೂ ಒಂದು ಫೋಟೋ ನೋಡಿದಿರಾ?
83ರ ಹರಯದ ’ಎವರ್ ಗ್ರೀನ್ ಹೀರೊ’ ದೇವಾನಂದ್ ’ಚಾರ್ಜ್ಶೀಟ್’ ಸಲ್ಲಿಸುತ್ತಿರುವ ಫೋಟೋ! ಅರ್ಥಾತ್ ತನ್ನ ಮುಂಬರುವ ಚಿತ್ರ ’ಚಾರ್ಜ್ಶೀಟ್’ ಬಗ್ಗೆ ಮಾತನಾಡುತ್ತಿರುವ ಫೋಟೋ.
ಕಾರುಬಾರು ನೋಡಿದರೆ ಪ್ರಣವ್, ದೇವಾನಂದ್ ಓಕೆ; ಅರ್ಜುನ್, ಜಾರ್ಜ್ (ಇನ್ನೂ) ಯಾಕೆ?
ವಾಜಪೇಯಿಯಹಾಗೆ ಡೀಸೆಂಟಾಗಿ ಮನೇರಿಲೋಕಾಗೋಲ್ವೆ?
ಈ ಅ(ರ್ಜುನ್)ಜಾ(ರ್ಜ್)ರಿಷ್ಟರ ಸಾಲಿಗೆ ಮಹಾ-ದ್ರಾವಿಡ ವೃದ್ಧ (ಕರುಣಾ)ನಿಧಿಯನ್ನೂ ಮತ್ತು ಮಹಾ-ರಾಷ್ಟ್ರೀಯ(ವಾದಿ) ಬಾಳ್ ಠಾಕ್ರೆಯನ್ನೂ ಸೇರಿಸಬಹುದಷ್ಟೆ.
(ನಡೆಯೋದು ನೋಡಿದರೆ, ’ರಾಮ)ರಾಮಾ!’ಈಶ್ವರ ಠಾಕೂರ್ ಏನು ಕಮ್ಮಿಯೇ?
ರಾಮೇಶ್ವರ ಠಾ’ಕೂರ’ರಿಗೆ ಕೂರಲೂ ಕಷ್ಟ, ಏಳಲೂ ಕಷ್ಟ!
ನಮ್ಮ ದೇವೇಗೌಡರೂ ರೇಸ್ನಲ್ಲಿದ್ದಾರಾದರೂ ಸಂಪೂರ್ಣ ಅರ್ಹತೆ ಇನ್ನೂ ಪಡೆದಿಲ್ಲ; ಪಡೆಯುವುದೂ ಬೇಡವೆಂಬುದು ನಮ್ಮ ಹಾರೈಕೆ. (ಏಕೆಂದರೆ, ಇದು ಓಡಲಾರದವರ-ಓಡಾಡಲಾರದವರ ರೇಸ್ ತಾನೆ.)
ರೇಸಿಗರ ಪಟ್ಟಿ ಇನ್ನೂ ಉದ್ದವಿದೆ.
ಹೇಸಿಗೆ ಹುಟ್ಟುವಷ್ಟು ಒದ್ದಾಟ ಮಾಡಿಕೊಂಡು ಅಧಿಕಾರದ ರೇಸಿಗೆ ಇಳಿಯುವ ಈ ’ಕೈ’-’ಲಾಗ’ದ ವಯೋವೃದ್ಧರನ್ನು ಕಂಡು ಅಯ್ಯೋ ಅನ್ನಬೇಕೆನ್ನಿಸುತ್ತದೆ. ಆದರೆ ನಾನು ಅನ್ನುವುದಿಲ್ಲ. ಏಕೆಂದರೆ, ಅಧಿಕಾರದ ಗದ್ದುಗೆ ಏರಿ(!) ಇವರು ಸುದ್ದಿಯಲ್ಲಿದ್ದುಕೊಂಡು ಆರಾಮಾಗಿ ನಿದ್ದೆಹೋಗುತ್ತಾರೆ; ಇಂಥವರ ಆಳ್ವಿಕೆಯಿಂದ ಅನುಭವಿಸುವುದು ಪ್ರಜೆಗಳಾದ ನಾವು.
ನಮ್ಮ ಬಗ್ಗೆಯೂ ಯಾರೂ ಅಯ್ಯೋ ಅನ್ನಬೇಕಾದ್ದಿಲ್ಲ. ಏಕೆಂದರೆ, ಇಂಥವರನ್ನು ಆರಿಸಿ ಕಳಿಸುವುದೇ/ಇಂಥವರ ಅಧಿಕಾರ ಚಲಾವಣೆಗೆ ಅನುವು ಮಾಡಿಕೊಡುವುದೇ ನಾವು ತಾನೆ?
ಆದ್ದರಿಂದ, ಮಾಡಿದ್ದುಣ್ಣೋ ಮಹರಾಯ!
’ಕೈ’ ಲಾಗದ ಇಬ್ಬರು ವೃದ್ಧರು ಪರಸ್ಪರ ಅದೇನನ್ನೋ ಹೇಳಲು-ಕೇಳಲು ಒದ್ದಾಡುತ್ತಿರುವ ಫೋಟೋ ಗಮನಿಸಿದಿರಾ?
ಗಾಲಿ ಕುರ್ಚಿ ಬಿಟ್ಟು ಎದ್ದೇಳಲಾರದ ಅರ್ಜುನಸಿಂಗರು, ’ಕಿವಿ ಸ್ವಲ್ಪ ದೂರ’ (pun intended) ಇರುವ ಪ್ರಣವ ಮುಖರ್ಜಿಗೆ ಏನನ್ನೋ ಹೇಳಲು ತಮ್ಮ ಮುಖ ಮುಂದೆಚಾಚಿ ಒದ್ದಾಡುತ್ತಿರುವರು; ಅದನ್ನು ಕೇಳಿಸಿಕೊಳ್ಳಲು ಪ್ರಣವರು ತಮ್ಮ ಕಿವಿಗೆ ಕೈ ಅಡ್ಡ ಇಟ್ಟುಕೊಂಡು ಒದ್ದಾಡುತ್ತಿರುವರು!
ಹಿಂದೆ ಕುಳಿತ ನಮ್ಮ ಬಿ.ಕೆ.ಹರಿಪ್ರಸಾದರು ಇದನ್ನು ನೋಡಿ ಮುಖ ಎತ್ತಿ ನಗುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೊಂದು ಫೋಟೋ ಗಮನಿಸಿದಿರಾ?
ವಯಸ್ಸಾಗಿದ್ದರೂ ತಾನು ನಡೆದಾಡಬಲ್ಲೆ, ತನಗೆ ಚುನಾವಣಾ ಟಿಕೆಟ್ ಬೇಕು, ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಯ ಮನೆಯವರೆಗೆ ಪಾದಯಾತ್ರೆಗೈದು ತೋರಿಸಲು ಬಿಹಾರಕ್ಕೆ ಬಂದಿಳಿದ ಜಾರ್ಜ್ ಫರ್ನಾಂಡಿಸರು ವಿಮಾನ ನಿಲ್ದಾಣದಲ್ಲಿ ದಿಗ್ವಿಜಯಸಿಂಗರ ನೆರವಿನಿಂದ ನಡೆಯುತ್ತಿರುವರು! ನಡೆದಾಡಲೂ ಕಷ್ಟಪಡುವ ಇವರು ತಾನು ಸುದೃಢವಾಗಿರುವೆನೆಂದು ತೋರಿಸಿಕೊಳ್ಳಲು ’ಲಾಗ’ಹಾಕುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೂ ಒಂದು ಫೋಟೋ ನೋಡಿದಿರಾ?
83ರ ಹರಯದ ’ಎವರ್ ಗ್ರೀನ್ ಹೀರೊ’ ದೇವಾನಂದ್ ’ಚಾರ್ಜ್ಶೀಟ್’ ಸಲ್ಲಿಸುತ್ತಿರುವ ಫೋಟೋ! ಅರ್ಥಾತ್ ತನ್ನ ಮುಂಬರುವ ಚಿತ್ರ ’ಚಾರ್ಜ್ಶೀಟ್’ ಬಗ್ಗೆ ಮಾತನಾಡುತ್ತಿರುವ ಫೋಟೋ.
ಕಾರುಬಾರು ನೋಡಿದರೆ ಪ್ರಣವ್, ದೇವಾನಂದ್ ಓಕೆ; ಅರ್ಜುನ್, ಜಾರ್ಜ್ (ಇನ್ನೂ) ಯಾಕೆ?
ವಾಜಪೇಯಿಯಹಾಗೆ ಡೀಸೆಂಟಾಗಿ ಮನೇರಿಲೋಕಾಗೋಲ್ವೆ?
ಈ ಅ(ರ್ಜುನ್)ಜಾ(ರ್ಜ್)ರಿಷ್ಟರ ಸಾಲಿಗೆ ಮಹಾ-ದ್ರಾವಿಡ ವೃದ್ಧ (ಕರುಣಾ)ನಿಧಿಯನ್ನೂ ಮತ್ತು ಮಹಾ-ರಾಷ್ಟ್ರೀಯ(ವಾದಿ) ಬಾಳ್ ಠಾಕ್ರೆಯನ್ನೂ ಸೇರಿಸಬಹುದಷ್ಟೆ.
(ನಡೆಯೋದು ನೋಡಿದರೆ, ’ರಾಮ)ರಾಮಾ!’ಈಶ್ವರ ಠಾಕೂರ್ ಏನು ಕಮ್ಮಿಯೇ?
ರಾಮೇಶ್ವರ ಠಾ’ಕೂರ’ರಿಗೆ ಕೂರಲೂ ಕಷ್ಟ, ಏಳಲೂ ಕಷ್ಟ!
ನಮ್ಮ ದೇವೇಗೌಡರೂ ರೇಸ್ನಲ್ಲಿದ್ದಾರಾದರೂ ಸಂಪೂರ್ಣ ಅರ್ಹತೆ ಇನ್ನೂ ಪಡೆದಿಲ್ಲ; ಪಡೆಯುವುದೂ ಬೇಡವೆಂಬುದು ನಮ್ಮ ಹಾರೈಕೆ. (ಏಕೆಂದರೆ, ಇದು ಓಡಲಾರದವರ-ಓಡಾಡಲಾರದವರ ರೇಸ್ ತಾನೆ.)
ರೇಸಿಗರ ಪಟ್ಟಿ ಇನ್ನೂ ಉದ್ದವಿದೆ.
ಹೇಸಿಗೆ ಹುಟ್ಟುವಷ್ಟು ಒದ್ದಾಟ ಮಾಡಿಕೊಂಡು ಅಧಿಕಾರದ ರೇಸಿಗೆ ಇಳಿಯುವ ಈ ’ಕೈ’-’ಲಾಗ’ದ ವಯೋವೃದ್ಧರನ್ನು ಕಂಡು ಅಯ್ಯೋ ಅನ್ನಬೇಕೆನ್ನಿಸುತ್ತದೆ. ಆದರೆ ನಾನು ಅನ್ನುವುದಿಲ್ಲ. ಏಕೆಂದರೆ, ಅಧಿಕಾರದ ಗದ್ದುಗೆ ಏರಿ(!) ಇವರು ಸುದ್ದಿಯಲ್ಲಿದ್ದುಕೊಂಡು ಆರಾಮಾಗಿ ನಿದ್ದೆಹೋಗುತ್ತಾರೆ; ಇಂಥವರ ಆಳ್ವಿಕೆಯಿಂದ ಅನುಭವಿಸುವುದು ಪ್ರಜೆಗಳಾದ ನಾವು.
ನಮ್ಮ ಬಗ್ಗೆಯೂ ಯಾರೂ ಅಯ್ಯೋ ಅನ್ನಬೇಕಾದ್ದಿಲ್ಲ. ಏಕೆಂದರೆ, ಇಂಥವರನ್ನು ಆರಿಸಿ ಕಳಿಸುವುದೇ/ಇಂಥವರ ಅಧಿಕಾರ ಚಲಾವಣೆಗೆ ಅನುವು ಮಾಡಿಕೊಡುವುದೇ ನಾವು ತಾನೆ?
ಆದ್ದರಿಂದ, ಮಾಡಿದ್ದುಣ್ಣೋ ಮಹರಾಯ!
ಟೈಂ ಕಿಲ್ಲರ್ (bullets ಅಲ್ಲ, pillets)
-1-
ಹೆಸರು ಮಲ್ಲಿಕಾ
ಕೆಲಸ ಕಿಲ್ಲಿಕಾ
ಶಿಕ್ಷೆ ಗಲ್ಲ್, ಇಕಾ.
-2-
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ
ಮೂರು ರೂಪಾಯಿಗೆ ಕೆಜಿ ಅಕ್ಕಿ-ಗೋಧಿ!
ಕೊಟ್ಟರೆ ಒಂದು ಪಕ್ಷ ನಾಳೆ
ತಿಂದೋರಿಗೆ ಗ್ಯಾರಂಟಿ ವಾಂತಿ-ಭೇದಿ!
-3-
ಸೌತ್ ಆಫ್ರಿಕಾದಲ್ಲಿ ಐಪಿಎಲ್ ಕ್ರಿಕೆಟ್.
ಇಂಡಿಯಾದಲ್ಲಿ ಟೂರ್ನಿ kicked the ಬಕೆಟ್!
ಅಂದು ಆಫ್ರಿಕದಲ್ಲಿ
eradication of the apartheid.
ಇಂದು ಅಲ್ಲಿ
rehabilitation of the disabled!
-4-
’ಈ ಸಲದ ಚುನಾವಣೇಲಿ
ಮುಖವಾಡಗಳದ್ದೇ ಕಾರುಬಾರಂತೆ.’
’ಪ್ರತಿ ಸಲವೂ ನಡೀತಿರೋದು
ಅದೇ ಅಲ್ದೆ ಇನ್ನೇನಂತೆ?’
ಹೆಸರು ಮಲ್ಲಿಕಾ
ಕೆಲಸ ಕಿಲ್ಲಿಕಾ
ಶಿಕ್ಷೆ ಗಲ್ಲ್, ಇಕಾ.
-2-
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ
ಮೂರು ರೂಪಾಯಿಗೆ ಕೆಜಿ ಅಕ್ಕಿ-ಗೋಧಿ!
ಕೊಟ್ಟರೆ ಒಂದು ಪಕ್ಷ ನಾಳೆ
ತಿಂದೋರಿಗೆ ಗ್ಯಾರಂಟಿ ವಾಂತಿ-ಭೇದಿ!
-3-
ಸೌತ್ ಆಫ್ರಿಕಾದಲ್ಲಿ ಐಪಿಎಲ್ ಕ್ರಿಕೆಟ್.
ಇಂಡಿಯಾದಲ್ಲಿ ಟೂರ್ನಿ kicked the ಬಕೆಟ್!
ಅಂದು ಆಫ್ರಿಕದಲ್ಲಿ
eradication of the apartheid.
ಇಂದು ಅಲ್ಲಿ
rehabilitation of the disabled!
-4-
’ಈ ಸಲದ ಚುನಾವಣೇಲಿ
ಮುಖವಾಡಗಳದ್ದೇ ಕಾರುಬಾರಂತೆ.’
’ಪ್ರತಿ ಸಲವೂ ನಡೀತಿರೋದು
ಅದೇ ಅಲ್ದೆ ಇನ್ನೇನಂತೆ?’
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)