ದಾರ್ಶನಿಕ ಕವಿ ಡಿ ವಿ ಜಿ ಅವರು ಮಹಾಚುನಾವಣೆಯ ಬಗ್ಗೆ ಕೆಲವು ಸೊಗಸಾದ ಪದ್ಯಗಳನ್ನು ಬರೆದಿದ್ದಾರೆಂದರೆ ಹಲವರಿಗೆ ಆಶ್ಚರ್ಯವಾಗಬಹುದು. ಆ ಪದ್ಯಗಳನ್ನು ಓದಿದಾಗ ನಮಗೆ, ’ಡಿ ವಿ ಜಿ ಕಾಲಕ್ಕೂ ಇಂದಿಗೂ ದೇಶದ ರಾಜಕೀಯ ಪರಿಸ್ಥಿತಿಯಲ್ಲಿ ವ್ಯತ್ಯಾಸವೇನಿಲ್ಲ’, ಎಂಬ ಸತ್ಯದ ಅರಿವು ಉಂಟಾಗುತ್ತದೆ. ೧೯೬೫ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಎಂಥ ನಿಂತ ನೀರೆಂಬುದು ನಮಗೆ ವೇದ್ಯವಾಗುತ್ತದೆ!
ಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. ದಿನೇದಿನೇ ಕೊಳಕು ಹೆಚ್ಚಾಗುತ್ತಿದೆ ಅಷ್ಟೆ.
ಅಂದು ಡಿ ವಿ ಜಿ ಬರೆದ ಪದ್ಯಗಳು ಇಂದಿಗೂ ಹೇಗೆ ಪ್ರಸ್ತುತವೆನಿಸುತ್ತವೆಂಬುದನ್ನು ಕೆಲ ಉದಾಹರಣೆಗಳ ಮೂಲಕ ನೋಡೋಣ.
ಮಹಾಚುನಾವಣೆಯನ್ನು ಡಿ ವಿ ಜಿ ಅವರು ’ವರಣ ಪ್ರಸ್ತ’ ಎಂದು ಕರೆಯುತ್ತಾರೆ. ’(ಜನಪ್ರತಿನಿಧಿಗಳನ್ನು) ಆರಿಸುವ ಶುಭ ಸಮಾರಂಭ’ ಎಂದು ಇದರರ್ಥ. ’ವರಣ ಪ್ರಸ್ತ’ ಎಂಬ ಶೀರ್ಷಿಕೆಯ ಪದ್ಯದಲ್ಲಿ ಡಿ ವಿ ಜಿ ಹೇಳುತ್ತಾರೆ:
ಏನು ಜಾತ್ರೆಯದು? ಏನಾ ಪ್ರಸ್ತವೊ!
ವೋಟಿನ ಹಾರಾಟಾ,
ಮಗುವೇ, ವೋಟಿನ ಹಾರಾಟಾ.
ನಾನು ತಾನೆನುತ್ತಿರುವಾ ಪ್ರತಿನಿಧಿ
ಪೋಟಿಯ ಮೇಲಾಟಾ,
ಮಗುವೇ, ಮೇಲುಪೋಟಿಯಾಟಾ.
ಮುಂದುವರಿದು ಅವರು ಚುನಾವಣಾ ರ್ಯಾಲಿ(rally)ಗಳ ಬಗ್ಗೆ ಹೇಳುತ್ತಾರೆ:
ಶಿಕ್ಷಣವಂತರು ಲಕ್ಷಣವತಿಯರು
ಲಕ್ಷಮಂದಿ ಪರಿಷೇ,
ಮಗುವೇ, ಲಕ್ಷಾಂತರ ಪರಿಷೇ.
ಅಕ್ಷರವರಿಯದ ಕುಕ್ಷಿಯ ಮರೆಯದ
ಅಕ್ಷಯಜನ ಪರಿಷೇ,
ಮಗುವೇ, ಸಾಕ್ಷಾತ್ ಜನ ಪರಿಷೇ.
ಪದ್ಯದ ಕೊನೆಯಲ್ಲಿ ಡಿ ವಿ ಜಿ ಅವರು ಅಭ್ಯರ್ಥಿಗಳ ಕಾಪಟ್ಯವನ್ನು ಹೀಗೆ ಬಿಚ್ಚಿಡುತ್ತಾರೆ:
ದೇಶೋದ್ಧಾರಕ ಮೋಸನಿವಾರಕ
ವೇಷದ ನಾಟಕವೋ,
ಮಗುವೇ, ವೇಷದ ನಾಟಕವೋ.
ಆಶಾದಾಯಕ ಘೋಷಣಕಾರಕ
ಹಾಸ್ಯವಿಕಾರಕವೋ,
ಮಗುವೇ, ಹಾಸ್ಯವಿಕಾರಕವೋ.
ವಿವಿಧ ಪಕ್ಷಗಳವರು ಮತಯಾಚನೆ ಮಾಡುವ ಬಗೆಯನ್ನು ’ಜನಜನವರಿಗೆ’ ಎಂಬ ಪದ್ಯದಲ್ಲಿ ಡಿ ವಿ ಜಿ ಸೊಗಸಾಗಿ ಬಣ್ಣಿಸುತ್ತಾರೆ:
ದೇಶಸ್ವತಂತ್ರಕ್ಕೆ ಮೀಶೆಬಿಟ್ಟವ ನಾನು;
ಕೊಡಿರೆನಗೆ ಮತವ,
ಹಿಡಿಯಿರಿದೊ ಹಿತವ;
ಇಂತೆಂದು ಬಂದನಾ ಘನ ಕಾಂಗ್ರೆಸಿಗನು.
ಬೇಸಾಯಗಾರಂಗೆ ಬೆನ್ನುಮೂಳೆಯೊ ನಾನು;
ತನ್ನಿರಾ ಮತವ,
ಬನ್ನಿ, ಕೊಳಿ ಹಿತವ;
ಇಂತೆಂದು ಬಂದನಾ ಕಿಸುಕಿಸಾನವನು.
ಕೂಲಿಯಾಳ್ಗಲನೆಲ್ಲ ಮೇಲಕೆತ್ತುವೆ ನಾನು;
ಇತ್ತ ಕೊಡಿ ಮತವ,
ಎತ್ತಿಕೊಳಿ ಹಿತವ;
ಇಂತೆಂದು ಬಂದನಾ ಮಜ್ದೂರಿನವನು.
...........................
ಕೀಳು ಮೇಲೆಂಬರ್ಗೆ ಕಾಲಾಂತಕನು ನಾನು;
ನೀಡಿರಾ ಮತವ,
ನೋಡಿರೀ ಹಿತವ;
ಇಂತೆಂದು ಬಂದನಾ ಹರಿಜನೋದ್ಧರನು.
ಸಾಲಹೊರೆ ಹೊತ್ತರ್ಗೆ ಕೀಲುಕುದುರೆಯು ನಾನು;
ಚಾಚಿರಾ ಮತವ,
ಬಾಚಿಕೊಳಿ ಹಿತವ;
ಇಂತೆಂದು ಬಂದನಾ ಋಣವಿಮೋಚಕನು.
.............................
ಧರ್ಮದುದ್ಧಾರವೇ ಪೆರ್ಮೆಯೆಂಬನು ನಾನು;
ಮುಡುಪಿಡಿರಿ ಮತವ,
ಪಿಡಿಯಿರಿದೊ ಹಿತವ;
ಇಂತೆಂದು ಬಂದನಾ ಹಿಂದುಸಭೆಯವನು.
ಹೀಗೆ ಮುಂದುವರಿಯುತ್ತದೆ ’ಜನಜನವರಿಗೆ’ ಪದ್ಯ.
’ಅಂಗೈಯ ವೈಕುಂಠ’ ಎಂಬ ಪದ್ಯದಲ್ಲಿ ಡಿ ವಿ ಜಿ ಅವರು ಚುನಾವಣೆ ದಾಟಿ ಮುಂದಕ್ಕೆ ಹೋಗುತ್ತಾರೆ.
ಪೊಳ್ಳು ಆಶ್ವಾಸನೆಗಳನ್ನು ನೀಡಿ ಆಯ್ಕೆಯಾದ ಅಭ್ಯರ್ಥಿಯು ’ಹೆಮ್ಮಂತ್ರಿ’ಯಾಗಿ ಮೆರೆಯುತ್ತಾನೆ, ಆದರೆ ಆಶ್ವಾಸನೆಗಳನ್ನು ಈಡೇರಿಸುವುದಿಲ್ಲ. ’ರೋಸಿದ್ದ ಜನವೆಲ್ಲ ಕಡೆಗೂರ ಚೌಕದಲಿ’ ನೆರೆದು, ಔತಣದ ನೆಪದಲ್ಲಿ ಆ ಮಂತ್ರಿಯನ್ನು ಕರೆಸಿ ತರಾಟೆಗೆ ತೆಗೆದುಕೊಳ್ಳುತ್ತಾರೆ. ಆಗ ಮಂತ್ರಿ ಉತ್ತರಿಸುತ್ತಾನೆ:
ವೇಷ ತೊಟ್ಟೆನು ನಿಮ್ಮ ಮನಮೆಚ್ಚಿಗಾಗಿ,
ಭಾಷೆ ಕೊಟ್ಟೆನು ನಿಮ್ಮ ವರಪತ್ರಕಾಗಿ.
ಅದೇ ಬಾಯಲ್ಲಿ ಆತ ಮತ್ತೆ ಹೇಳುತ್ತಾನೆ:
ಈ ಸಾರಿ ನೀಮೆನ್ನನಾರಿಸಿರಿ, ನಾನು
ಮೂಸಲದ ಋಣಬಡ್ಡಿಯೆಲ್ಲ ತೀರಿಪೆನು.
ಮುಗ್ಧ ಮತದಾರರು ಅವನನ್ನು ಮತ್ತೆ ನಂಬುತ್ತಾರೆ!
ದೂರ್ವುದೇಕವನ ನಾಮ್? ಅವನ ಮನಸೊಳಿತು;
ಪೂರ್ವಕರ್ಮವು ನಮ್ಮದದರ ಫಲವಿನಿತು.
ಹೀಗೆಂದುಕೊಂಡು ಜನರು ಮತ್ತೆ ಮುಂದಿನ ಚುನಾವಣೆಯಲ್ಲೂ ಆತನನ್ನೇ ಆಯ್ಕೆಮಾಡುತ್ತಾರೆ! ಆತನದೋ, ಮತ್ತೆ ಅದೇ ಚಾಳಿ! ಇದನ್ನು ಕಂಡು ಕವಿ (ಡಿ ವಿ ಜಿ) ಉದ್ಗರಿಸುತ್ತಾರೆ:
ಕಲಿಯಿತೇಂ ಜನತೆಯಂಗೈಯ ವೈಕುಂಠದಿಂ
ರಾಜ್ಯಪಾಠವನು?
ತಿಳಿಯಿತೇಂ ಕಂಡ ಮುಂಗೈಯ ಕೈಲಾಸದಿಂ
ಭೋಜ್ಯದೂಟವನು?
ಮರೆವು ಕವಿಯಿತು ಜನವ ನಿಶಿನಿದ್ದೆಯೊಡನೆ;
ಕರಗಿತಾ ಕಹಿನೆನಪು ಬಿಸಿಮುದ್ದೆಯೊಡನೆ.
ಡಿ ವಿ ಜಿ ಅವರ ಈ ಮಾತು ಇಂದಿಗೂ ಅಷ್ಟೇ ಪ್ರಸ್ತುತವಲ್ಲವೆ? ’ಪಬ್ಲಿಕ್ ಮೆಮೊರಿ ಈಸ್ ಷಾರ್ಟ್’ ತಾನೆ? ಅದರ ದುರುಪಯೋಗವನ್ನೇ ಅಲ್ಲವೆ ನಮ್ಮ ಪುಢಾರಿಗಳು ಮಾಡಿಕೊಳ್ಳುತ್ತಿರುವುದು? ಇಂಥ ಪುಢಾರಿಯನ್ನು ’ಜನನಾಯಕ’ ಎಂಬ ಪದ್ಯದಲ್ಲಿ ಡಿ ವಿ ಜಿ ಅವರು ಸಖತ್ತಾಗಿ ಬೆಂಡೆತ್ತಿದ್ದಾರೆ. ಆ ಪದ್ಯದ ಪೂರ್ಣಪಾಠ ಇಂತಿದೆ:
ಎಲ್ಲಿಂದ ಬಂದೆಯೋ ಜನನಾಯಕಾ-ಎಂಥ
ಒಳ್ಳೆಯದ ತಂದೆಯೋ ಜನನಾಯಕ.
ಬೆಲ್ಲವನು ಕಿವಿಗೀವ ಜನನಾಯಕಾ ನೀನು
ಸುಳ್ಳಾಡದಿರು ಸಾಕು-ಜನನಾಯಕಾ.
ಗಗನದಿಂದಿಳಿದೆಯಾ ಮಘವಂತ ದೂತನೇ
ಮುಗಿಲಂತೆ ಗುಡುಗಾಡುತಿರುವೆಯೇಕೋ?
ಸೊಗವೀವ ಮಳೆಯ ನೀಂ ಕರೆಯಬಲ್ಲೆಯ ಬರಿ
ಹೊಗೆಯ ಮೋಡವೊ ನೀನು-ಜನನಾಯಕಾ.
ಪಾತಾಳದಿಂದೆದ್ದು ಬಂದಿಹೆಯ ನೀನು,
ಭೇತಾಳ ಮಾಯೆಗಳ ಮಾಡಲಿಹೆಯಾ?
ಮಾತಿನಿಂ ಮಾತೆಗೇನುದ್ಧಾರವೋ ನಿನ್ನ
ಬೂತಾಟಿಕೆಗಳೇಕೊ-ಜನನಾಯಕಾ.
ಕಡಲ ಮಧ್ಯದಿನೆದ್ದು ಬಂದಿರುವೆಯಾ ನೀನು,
ಕಡೆದು ನಮಗಮೃತವನು ತಂದಿರುವೆಯಾ?
ಪೊಡವಿಯಾಳ್ತನವೇನು ಬುಡುಬುಡುಕಿಯಾಟವೇ?
ದುಡಿತ ನೀನೇನರಿವೆ?-ಜನನಾಯಕಾ.
ನಾಗಲೋಕದಿನೆದ್ದು ಬಂದೆಯೇನೋ ಬರಿಯ
ಲಾಗಾಟ ಕೂಗಾಟ ನಿನ್ನ ಬದುಕು.
ನೇಗಿಲನು ಪಿಡಿದು ನೆಲನುಳಬಲ್ಲೆಯಾ ನೀನು
ನಾಗರ ಕಳಿಂಗನೋ-ಜನನಾಯಕಾ.
ಯಾವ ವಿದ್ಯೆಯ ಬಲ್ಲೆ? ಯಾವ ವ್ರತವ ಗೈದೆ?
ಜೀವನದ ಮರ್ಮವೇನರಿತವನೆ ನೀಂ?
ಸಾವಧಾನದ ತಪಸ್ಸಲ್ಲವೇನೋ ರಾಷ್ಟ್ರ-
ಸೇವೆಯ ಮಹಾಕಾರ್ಯ-ಜನನಾಯಕಾ.
ಗಾಂಧಿ ಗಾಂಧಿಯೆನುತ್ತಲಡಿಗಡಿಗೆ ಕೂಗುತಿಹೆ
ಗಾಂಧಿವೋಲನುದಿನದಿ ಬಾಳುತಿಹೆಯಾ?
ದಾಂಧಲೆಯ ಮಾಡಿ ನೀಂ ಪದವಿಗೇರುವನೆಂದು
ಸಂದೇಹವೋ ನಮಗೆ-ಜನನಾಯಕಾ.
ಗಾಳಿತಿತ್ತಿಯೊ ನೀನು ಜನನಾಯಕಾ-ಹಳಸು
ಕೂಳು ಬುತ್ತಿಯೊ ನೀನು ಜನನಾಯಕಾ.
ದಾಳದಾಟವೊ ನೀನು ಜನನಾಯಕಾ-ನಮ್ಮ
ಫಾಲಲಿಪಿಯೋ ನೀನು-ಜನನಾಯಕಾ.
ದಾರ್ಶನಿಕ ಕವಿ ಡಿ ವಿ ಜಿ ಅವರು ಈ ಪದ್ಯದ ಕೊನೆಯಲ್ಲಿ, ’ಇಂಥ ಜನನಾಯಕನನ್ನು ಹೊಂದಿರುವುದು ನಮ್ಮ ಹಣೆಬರಹ’ ಎಂಬ ತೀರ್ಮಾನಕ್ಕೆ ಬಂದಿರುವುದನ್ನು ನೋಡಿದರೆ ಅಂದಿನ ರಾಜಕಾರಣವೂ ಎಷ್ಟು ಹೊಲೆಗಟ್ಟಿತ್ತೆಂಬುದನ್ನು ನಾವು ಊಹಿಸಬಹುದು. ಡಿ ವಿ ಜಿ ಅವರ ಬೇಗುದಿಯೂ ಇಲ್ಲಿ ನಮ್ಮ ಕಣ್ಣಿಗೆ ಕಟ್ಟುತ್ತದೆ.
ಇನ್ನು, ಮಹಾಚುನಾವಣೆಯೆಂಬ ಈ ’ಜನವಂಚನೆ’ಯ ಬಗ್ಗೆ ಕವಿಯ ಕಲ್ಪನೆಯು ಎಂಥ ಉತ್ತುಂಗವನ್ನು ತಲುಪಿದೆಯೆಂದರೆ, ಪುಢಾರಿಗಳ ಬಾಯಲ್ಲಿ ಸಿಕ್ಕಿಬಿದ್ದ ಸರಸ್ವತಿಯು ಬಿಡುಗಡೆಗಾಗಿ ಬ್ರಹ್ಮನ ಮೊರೆಹೊಗುತ್ತಾಳೆ! ’ಸರಸ್ವತಿಯ ಪ್ರಾರ್ಥನೆ’ ಪದ್ಯದಲ್ಲಿ ಆ ದೇವಿಯು ಬ್ರಹ್ಮನನ್ನು ಈ ರೀತಿ ಪ್ರಾರ್ಥಿಸುತ್ತಾಳೆ:
ಬಿಡಿಸೆನ್ನ ರಾಜ್ಯಕರ ಹಿಡಿತದಿಂ ವಿಧಿಯೇ
ತೊದಲು ತುಟಿಗೆನ್ನ ಬಲಿಕೊಡಬೇಡ ಪತಿಯೇ.
ದೇಶದುದ್ಧಾರಕ್ಕೆ ಭಾಷಣವೆ ಪಥವಂತೆ,
ಘೋಷಣೆಯ ಲೋಕ ಸಂತೋಷ ನಿಧಿಯಂತೆ.
ಆಶೆಯಾಗಿಸೆ ಜನಕೆ ವೇಷ ತೊಡಿಸುವರೆನಗೆ
ವೇಶಿತನವನದೆಂತು ಸೈಸಲಹುದಜನೇ.
ಮಾತು ನೂಲನು ಜೇಡ ಬಲೆಯಾಗಿ ನೆಯ್ದು
ವೋಟು ನೊಣಗಳ ಪಿಡಿವ ಹೂಟವನು ಹೂಡಿ
ಊಟಕ್ಕೆ ಬಾಯ್ದೆರೆವ ಮಾಟಗಾರರಿಗೆ ನಾಂ
ಚೇಟಿಯಾಗುವೆನೆ? ಈ ಕೋಟಲೆಯ ಹರಿಸೈ.
ಕವಿಯ ಕಲ್ಪನೆಯಿಲ್ಲಿ ಅನ್ಯಾದೃಶವಲ್ಲವೆ?
ಮಹಾಚುನಾವಣೆಯ ಬಗ್ಗೆ ಡಿ ವಿ ಜಿ ಅವರು ಅಂದು ಆಡಿರುವ ನುಡಿಗಳು ಇಂದಿಗೂ ಪ್ರಸ್ತುತ.
ಡಿ ವಿ ಜಿ ಅವರ ’ಮಂಕುತಿಮ್ಮನ ಕಗ್ಗ’ ಅದೊಂದು ಲೋಕಸತ್ಯ; ಸಾರ್ವಕಾಲಿಕ ಸತ್ಯ. ಆದರೆ, ಮಹಾಚುನಾವಣೆಯ ಬಗ್ಗೆ ಡಿ ವಿ ಜಿ ಅವರು ಆಡಿರುವ ನುಡಿಗಳು ಸಾರ್ವಕಾಲಿಕ ಸತ್ಯ ಆಗದಿರಲಿ ಎಂಬುದು ನಮ್ಮ ನಿಮ್ಮೆಲ್ಲರ ಅಪೇಕ್ಷೆ. ಡಿ ವಿ ಜಿ ಅವರ ಅಪೇಕ್ಷೆಯೂ ಇದೇ ಆಗಿತ್ತಲ್ಲವೆ?
ಈ ಅಪೇಕ್ಷೆಯನ್ನು ನಿಜವಾಗಿಸುವ ಅವಕಾಶ, ಅರ್ಥಾತ್, ದುಷ್ಟ-ಭ್ರಷ್ಟ ಜನನಾಯಕರಿಗೆ ’ಗತಿ ಕಾಣಿಸುವ’ ಅವಕಾಶ ದೇಶಾದ್ಯಂತ ನಮಗೀಗ ಒದಗಿಬಂದಿದ್ದು, ಮತಪತ್ರಗಳ ಮೂಲಕ ನಾವು ಆ ಕೆಲಸವನ್ನು ಮಾಡಿದ್ದೇವೆಯೇ?
ಇದೇ ೧೬ರಂದು ಗೊತ್ತಾಗುತ್ತದೆ.
leader ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
leader ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಶುಕ್ರವಾರ, ಮೇ 8, 2009
ಗುರುವಾರ, ಮಾರ್ಚ್ 26, 2009
ಎಲೆಕ್ಷನ್ ಕಾಲ
ಕಾಲ ಕೆಟ್ಟೋಯ್ತು!
ಸ್ಪರ್ಧಿಸ್ತೀನಿ ಅಂದೋರು ಸ್ಪರ್ಧಿಸೋಲ್ಲ! (ಕೃಷ್ಣಕೃಷ್ಣಾ!)
ಸ್ಪರ್ಧಿಸೋಲ್ಲ ಅಂದೋರು ಸ್ಪರ್ಧಿಸ್ತಾರೆ! (ರಾಘವೇಂದ್ರಾ!)
ಸತ್ಯಹರಿಶ್ಚಂದ್ರನ್ಹಾಗಾಡೋರು ಸುಳ್ಳು ಮತದಾರರನ್ನ ಸೃಷ್ಟಿಸ್ತಾರೆ! (ಜನಾರ್ದನಾ!)
ಪೊಳ್ಳು ಭರವಸೆ ನೀಡೋರು ಒಳ್ಳೆ ಹೀರೋ ಹಂಗಾಡ್ತಾರೆ! (ರಾಮ(ಶ್ರೀ)ರಾಮಾ!)
ನೀತಿ ಮಾತಾಡೋರು ಸಂಹಿತೆ ಉಲ್ಲಂಘಿಸ್ತಾರೆ! (ಯಡಿಯೂರೇಶ್ವರಾ!)
ಒಳಗೆ ಕುದಿಯುವವರು ಹೊರಗೆ ಹಲ್ಕಿರ್ಕೊಂಡಿರ್ತಾರೆ! (ಸದಾನಂದಾ!)
ಅಜ್ಜನ ವಯಸ್ಸಿನವರು ರಾಹುಲ್ ಅನ್ತಕ್ಕಂಥಾ ಹುಡುಗನಿಗೆ ಸಲಾಂ ಹೊಡೀತಾರೆ! (ಚೆನ್ನ-ಮಲ್ಲಿಕಾರ್ಜುನಾ!)
ಹುಲಿಯಂಗಾಡೋರು ಒಂದು ಯಃಕಶ್ಚಿತ್ ಹೆಣ್ಣಿಲಿಗೆ ಹೆದರ್ತಾರೆ! (ಶಿವಶಿವಾ!)
ಖಾಲಿ ಬುರುಡೆಯವರು ತುಂಬಿದವರಂಗೆ ತುಳು’ಕಾಡ್ತಾರೆ’! (ಉಗ್ರ-ನರಸಿಂಹಾ!)
ಮಾಜಿ ಪ್ರಧಾನಿಗಳು ಸದಾಕಾಲ ’ಮುದ್ದೆ-ನಿದ್ದೆ-ಗೆದ್ದೆ’ ಜಪ ಮಾಡ್ತಾರೆ! (ದೇವದೇವಾ!)
ಹಾಲಿ ಹಾಲಧ್ಯಕ್ಷರು ಸಿಎಂ ಕುರ್ಚಿಯ ಕನಸು ಕಾಣ್ತಾರೆ! (ರೇವರೇವಾ!)
ಪ್ರತಿಭೆಯಿದ್ದವರು ಮನೇಲಿ ಕೂತು ಕೊರಗ್ತಾರೆ! (ಅಂಬಾ-ಭವಾನೀ!)
ಚಾಣಾಕ್ಷರು ರಾಜ-ಕುಮಾರ ಆಗ್ತಾರೆ! (ಕುಮಾರಾ-ಸ್ವಾಮೀ!)
ದತ್ತುಪುತ್ರರು ಕತ್ತು ಬಗ್ಗಿಸಿ ಕತ್ತೆಯಹಾಗೆ ದುಡೀತಾರೆ! (why? yes! we (are one ಅನ್ನುವ) ದತ್ತಾ!)
ಕನ್ನಡದ ಕಾಮಗಾರಿ ಗೊತ್ತಿಲ್ಲದೋರು ಬರಿದೆ ’ನಾಮಫಲಕ’ ಅಂತ ಬೊಬ್ಬೆಹೊಡೀತಾರೆ! (ಚಂದ್ರುಶೇಖರಾ!)
ಮತ್ತು
ತನ್ದು ತಾನ್ ನೋಡ್ಕೊಂಡು ’ಆನಂದ’ವಾಗಿರೋದ್ ಬಿಟ್ಟು ಹ’ರಾಮ’ಖೋರ್ ಸಾಸ್ತ್ರಿ ಎಲ್ಲಾರ್ಗೂ ಗುಳಿಗೆ ಗುಂಡಾಂತರ ಮಾಡ್ತಾನೆ! (ಆನಂದ(ಹ)ರಾಮ ರಾಮಾ!)
ಸ್ಪರ್ಧಿಸ್ತೀನಿ ಅಂದೋರು ಸ್ಪರ್ಧಿಸೋಲ್ಲ! (ಕೃಷ್ಣಕೃಷ್ಣಾ!)
ಸ್ಪರ್ಧಿಸೋಲ್ಲ ಅಂದೋರು ಸ್ಪರ್ಧಿಸ್ತಾರೆ! (ರಾಘವೇಂದ್ರಾ!)
ಸತ್ಯಹರಿಶ್ಚಂದ್ರನ್ಹಾಗಾಡೋರು ಸುಳ್ಳು ಮತದಾರರನ್ನ ಸೃಷ್ಟಿಸ್ತಾರೆ! (ಜನಾರ್ದನಾ!)
ಪೊಳ್ಳು ಭರವಸೆ ನೀಡೋರು ಒಳ್ಳೆ ಹೀರೋ ಹಂಗಾಡ್ತಾರೆ! (ರಾಮ(ಶ್ರೀ)ರಾಮಾ!)
ನೀತಿ ಮಾತಾಡೋರು ಸಂಹಿತೆ ಉಲ್ಲಂಘಿಸ್ತಾರೆ! (ಯಡಿಯೂರೇಶ್ವರಾ!)
ಒಳಗೆ ಕುದಿಯುವವರು ಹೊರಗೆ ಹಲ್ಕಿರ್ಕೊಂಡಿರ್ತಾರೆ! (ಸದಾನಂದಾ!)
ಅಜ್ಜನ ವಯಸ್ಸಿನವರು ರಾಹುಲ್ ಅನ್ತಕ್ಕಂಥಾ ಹುಡುಗನಿಗೆ ಸಲಾಂ ಹೊಡೀತಾರೆ! (ಚೆನ್ನ-ಮಲ್ಲಿಕಾರ್ಜುನಾ!)
ಹುಲಿಯಂಗಾಡೋರು ಒಂದು ಯಃಕಶ್ಚಿತ್ ಹೆಣ್ಣಿಲಿಗೆ ಹೆದರ್ತಾರೆ! (ಶಿವಶಿವಾ!)
ಖಾಲಿ ಬುರುಡೆಯವರು ತುಂಬಿದವರಂಗೆ ತುಳು’ಕಾಡ್ತಾರೆ’! (ಉಗ್ರ-ನರಸಿಂಹಾ!)
ಮಾಜಿ ಪ್ರಧಾನಿಗಳು ಸದಾಕಾಲ ’ಮುದ್ದೆ-ನಿದ್ದೆ-ಗೆದ್ದೆ’ ಜಪ ಮಾಡ್ತಾರೆ! (ದೇವದೇವಾ!)
ಹಾಲಿ ಹಾಲಧ್ಯಕ್ಷರು ಸಿಎಂ ಕುರ್ಚಿಯ ಕನಸು ಕಾಣ್ತಾರೆ! (ರೇವರೇವಾ!)
ಪ್ರತಿಭೆಯಿದ್ದವರು ಮನೇಲಿ ಕೂತು ಕೊರಗ್ತಾರೆ! (ಅಂಬಾ-ಭವಾನೀ!)
ಚಾಣಾಕ್ಷರು ರಾಜ-ಕುಮಾರ ಆಗ್ತಾರೆ! (ಕುಮಾರಾ-ಸ್ವಾಮೀ!)
ದತ್ತುಪುತ್ರರು ಕತ್ತು ಬಗ್ಗಿಸಿ ಕತ್ತೆಯಹಾಗೆ ದುಡೀತಾರೆ! (why? yes! we (are one ಅನ್ನುವ) ದತ್ತಾ!)
ಕನ್ನಡದ ಕಾಮಗಾರಿ ಗೊತ್ತಿಲ್ಲದೋರು ಬರಿದೆ ’ನಾಮಫಲಕ’ ಅಂತ ಬೊಬ್ಬೆಹೊಡೀತಾರೆ! (ಚಂದ್ರುಶೇಖರಾ!)
ಮತ್ತು
ತನ್ದು ತಾನ್ ನೋಡ್ಕೊಂಡು ’ಆನಂದ’ವಾಗಿರೋದ್ ಬಿಟ್ಟು ಹ’ರಾಮ’ಖೋರ್ ಸಾಸ್ತ್ರಿ ಎಲ್ಲಾರ್ಗೂ ಗುಳಿಗೆ ಗುಂಡಾಂತರ ಮಾಡ್ತಾನೆ! (ಆನಂದ(ಹ)ರಾಮ ರಾಮಾ!)
ಸ್ವರ್ಗ-ನರಕದ ಸುದ್ದಿ
ಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾ ಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. ಪತ್ರಕರ್ತರು ಖಾಲೀಹಾತ್ ಬರಬೇಕಿತ್ತು. ಪೆನ್ನು ಮತ್ತು ಹಾಳೆಗಳನ್ನು ಅಲ್ಲಿಯೇ ಒದಗಿಸುವ ವ್ಯವಸ್ಥೆಯಾಗಿತ್ತು. ದೃಶ್ಯಮಾಧ್ಯಮದವರೂ ಕೂಡ ಈ ನಿಯಮಕ್ಕೆ ಒಳಪಡಬೇಕಾಗಿತ್ತು. ಆ ಪೆನ್ನು-ಹಾಳೆಗಳೋ, ಭೂಲೋಕದಿಂದ ತರಿಸಿದವೇ ಆಗಿದ್ದವು!
ಸ್ವರ್ಗದ ಪತ್ರಿಕಾಗೋಷ್ಠಿಗೆ ಹೋಗಿಬರಲು ಪತ್ರಕರ್ತರ ನೂಕುನುಗ್ಗಲು. ನರಕಕ್ಕೆ ಹೋಗಿಬರಲು ಯಾರೂ ತಯಾರಿಲ್ಲ. ಕೊನೆಗೆ ಜ್ಯೂನಿಯರ್ ಪತ್ರಕರ್ತ-ಕರ್ತೆಯರನ್ನು ನರಕಕ್ಕೆ ಅಟ್ಟಲಾಯಿತು.
ನರಕದ ಪತ್ರಿಕಾಗೋಷ್ಠಿಯಲ್ಲಿ ಯಮನ ವಕ್ತಾರನು, ಭೂಲೋಕದ ರಾಜಕಾರಣಿಗಳಿಗಾಗಿಯೇ ಸ್ಥಾಪಿಸಲಾಗುವ ಸದರಿ ವಿಶೇಷ ಘಟಕದ ಬಗ್ಗೆ ಈ ರೀತಿ ವಿವರಿಸಿದನು:
’ರಾಜಕಾರಣಿಗಳು ತಾವು ಮಾಡಿದ ಪಾಪಗಳಿಗೆ ಭೂಲೋಕದಲ್ಲಿ ಯಾವುದೇ ಶಿಕ್ಷೆಯನ್ನು ಅನುಭವಿಸದೇ ಹಾಯಾಗಿ ಮಜಾಮಾಡಿಕೊಂಡಿದ್ದು ಕೊನೆಗೆ ನರಕಕ್ಕೆ ಬರುತ್ತರಾದ್ದರಿಂದ ನರಕದಲ್ಲಿ ಅವರಿಗೆ ನಾನಾ ಬಗೆಯ ಶಿಕ್ಷೆಗಳನ್ನು ಕೊಡುವ ಅವಶ್ಯಕತೆಯಿದೆ. ಭೂಲೋಕದಿಂದ ಬರುವ ರಾಜಕಾರಣಿಗಳ ಸಂಖ್ಯೆಯೂ ಬರಬರುತ್ತ ಏರತೊಡಗಿದೆ. ಆದ್ದರಿಂದ ಅವರಿಗಾಗಿಯೇ ವಿಶೇಷ ಘಟಕವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಲದ ಭಾರತೀಯ ಯುಗಾದಿಯ ಮುನ್ನಾದಿನವಾದ ಅಮಾವಾಸ್ಯೆಯ ರಾತ್ರಿ ಹನ್ನೆರಡಕ್ಕೆ ಘಟಕದ ಉದ್ಘಾಟನೆ’, ಎಂದು ನರಕದ ವಕ್ತಾರನು ಪತ್ರಕರ್ತರಿಗೆ ವಿವರಿಸಿದನು.
’ಭೂಲೋಕದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಇಲ್ಲಿ ಯಾವ ರೀತಿಯ ಶಿಕ್ಷೆಗಳನ್ನು ಕೊಡುತ್ತೀರಿ?’ ಎಂದು ಇಂಗ್ಲಿಷ್ ದೃಶ್ಯಮಾಧ್ಯಮವೊಂದರ ಪ್ರತಿನಿಧಿ ಕೇಳಿದಳು. (ಅವಳ ಹೆಸರು ಬುರ್ಖಾ ದತ್.)
’ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಯಾವ ಶಿಕ್ಷೆಯನ್ನೂ ಇಲ್ಲಿ ನೀಡಲಾಗುವುದಿಲ್ಲ. ಏಕೆಂದರೆ ನೀತಿಸಂಹಿತೆ ಉಲ್ಲಂಘನೆಗಾಗಿ ಅವರೆಲ್ಲ ಭೂಲೋಕದಲ್ಲೇ ಚುನಾವಣಾ ಆಯೋಗದ ಕೈಲಿ ತಕ್ಕ ಶಿಕ್ಷೆ ಅನುಭವಿಸಿಯೇ ಬಂದಿರುತ್ತಾರೆ. ಆದ್ದರಿಂದ ಅದಕ್ಕಾಗಿ ಇಲ್ಲಿ ಪುನಃ ಶಿಕ್ಷೆ ಕೊಡುವ ಅಗತ್ಯವಿಲ್ಲ’, ಎಂದು ನರಕದ ವಕ್ತಾರನು ಉತ್ತರಿದನು.
ಅತ್ತ ಸ್ವರ್ಗದ ಪತ್ರಿಕಾಗೋಷ್ಠಿಯಲ್ಲಿ ಸ್ವರ್ಗದ ವಕ್ತಾರನು ಹೇಳಿದ್ದಿಷ್ಟು:
’ಈ ಸಲದ ಭಾರತೀಯ ಯುಗಾದಿಯ ಆರಂಭದ ಶುಭಗಳಿಗೆಯಾದ ರಾತ್ರಿ ಹನ್ನೆರಡು ಗಂಟೆ, ಒಂದು ಸೆಕೆಂಡಿಗೆ ನಮ್ಮ ವಿಶೇಷ ಘಟಕದ ಉದ್ಘಾಟನೆ. ತಮ್ಮ ನ್ಯಾಯಬದ್ಧ ಬೇಡಿಕೆಗಳನ್ನು ಹಿಡಿದುಕೊಂಡು ಸರ್ಕಾರಿ ಕಚೇರಿಗಳಿಗೆ ಅಥವಾ/ಮತ್ತು ರಾಜಕಾರಣಿಗಳ ಬಳಿಗೆ ಓಡಾಡಿ ಓಡಾಡಿ ಓಡಾಡಿ ಬೇಸತ್ತು ಸತ್ತು ಇಲ್ಲಿಗೆ ಬರುವ ಬಡಪಾಯಿಗಳಿಗೆ ವಿಶೇಷ ಸುಖ-ಸೌಲತ್ತುಗಳನ್ನು ನೀಡುವ ಮೂಲಕ ನ್ಯಾಯ ದೊರಕಿಸಿಕೊಡಲಿಕ್ಕಾಗಿ ಈ ಘಟಕದ ಸ್ಥಾಪನೆ.’
ಆಗ ವರದಾ ನಾಯಕ್ ಎಂಬ ಟಿವಿ ಪತ್ರಕರ್ತೆ ಬಾಲಕಿಯು ಈ ರೀತಿ ಪ್ರಶ್ನೆ ಕೇಳಿದಳು:
’ಮುಖ್ಯಮಂತ್ರಿಗಳ ಜನತಾದರ್ಶನದ ಬಲೆಗೆ ಬಿದ್ದು ಒದ್ದಾಡಿದ ಮಿಕಗಳಿಗೇನಾದರೂ ವಿಶೇಷ ಸುಖ-ಸೌಲತ್ತುಗಳಿವೆಯೆ?’
ವಕ್ತಾರನ ಉತ್ತರ:
’ಖಂಡಿತ ಖಂಡಿತ. ಇಲ್ಲದಿದ್ದರೆ ಹೇಗೆ?’
ಮೇಲಿನ ಎರಡೂ ಪತ್ರಿಕಾಗೋಷ್ಠಿಗಳಿಗೆ (ಊಹ್ಞೂಂ, ಒಂದು ಮೇಲಿನ ಮತ್ತು ಇನ್ನೊಂದು ಕೆಳಗಿನ ಪತ್ರಿಕಾಗೋಷ್ಠಿಗೆ) ಹೋಗಿಬಂದ ಪತ್ರಕರ್ತರನ್ನು ಗುಳಿಗೆಪ್ಪನವರು ವಿಚಾರಿಸಿದಾಗ ಒಂದು ಆಶ್ಚರ್ಯಕರ ಸಂಗತಿ ಹೊರಬಿತ್ತು!
ಸದಾಕಾಲ ಮೃಷ್ಟಾನ್ನಭೋಜನವನ್ನೇ ಉಂಡು ಉಂಡು ನಾಲಗೆ ಜಡ್ಡು ಹಿಡಿಸಿಕೊಂಡಿದ್ದ ಸ್ವರ್ಗದ ವ್ಯವಸ್ಥಾಪಕರು ಇದೇ ಅವಕಾಶವೆಂದು ಪತ್ರಿಕಾಗೋಷ್ಠಿಯಲ್ಲಿ ಸಖ್ಖತ್ ಖಾರದ ಅಡುಗೆ (ಅಂದರೆ ಎನ್.ವಿ. ಅಲ್ಲ) ಮಾಡಿಸಿದ್ದರಂತೆ! ’ಯಮ’ಖಾರವಂತೆ! ಅದೇವೇಳೆ ನರಕದಲ್ಲಿ, ಇದೇ ಚಾನ್ಸ್ ಎಂದು ಅಲ್ಲಿನ ವ್ಯವಸ್ಥಾಪಕರು ಬಗೆಬಗೆಯ ಭಕ್ಷ್ಯಭೋಜ್ಯಗಳ ಭೂರಿಭೋಜನದ ಏರ್ಪಾಟು ಮಾಡಿದ್ದರಂತೆ!
ಇನ್ನೊಂದು ವಿಷಯವೆಂದರೆ, ಬಹುಪಾಲು ನಟನಟಿಯರು, ಜನನಾಯಕರು, ರೂಪದರ್ಶಿಯರು ಇತ್ಯಾದಿಯವರೆಲ್ಲ ನರಕದಲ್ಲೇ ಇದ್ದರಂತೆ! ಪತ್ರಕರ್ತರಿಗೆ ಅವರನ್ನೆಲ್ಲ ಕಾಣುವ ಅವಕಾಶ ದೊರಕಿತಂತೆ. ಸ್ವರ್ಗದಲ್ಲೋ, ಅಪ್ಪಟ ಗಾಂಧಿವಾದಿಗಳು, ನಿಜಸನ್ಯಾಸಿಗಳು, ಮುಗ್ಧರು, ಭೂಲೋಕದಲ್ಲಿ ನಾನಾ ಬಗೆಯ ಶೋಷಣೆಗೊಳಗಾದವರು ಇಂಥವರೇ ತುಂಬಿದ್ದರಂತೆ.
ಸ್ವರ್ಗಕ್ಕೆ ಹೋಗಿಬಂದ ಪತ್ರಕರ್ತರೀಗ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ!
ಸ್ವರ್ಗದ ಪತ್ರಿಕಾಗೋಷ್ಠಿಗೆ ಹೋಗಿಬರಲು ಪತ್ರಕರ್ತರ ನೂಕುನುಗ್ಗಲು. ನರಕಕ್ಕೆ ಹೋಗಿಬರಲು ಯಾರೂ ತಯಾರಿಲ್ಲ. ಕೊನೆಗೆ ಜ್ಯೂನಿಯರ್ ಪತ್ರಕರ್ತ-ಕರ್ತೆಯರನ್ನು ನರಕಕ್ಕೆ ಅಟ್ಟಲಾಯಿತು.
ನರಕದ ಪತ್ರಿಕಾಗೋಷ್ಠಿಯಲ್ಲಿ ಯಮನ ವಕ್ತಾರನು, ಭೂಲೋಕದ ರಾಜಕಾರಣಿಗಳಿಗಾಗಿಯೇ ಸ್ಥಾಪಿಸಲಾಗುವ ಸದರಿ ವಿಶೇಷ ಘಟಕದ ಬಗ್ಗೆ ಈ ರೀತಿ ವಿವರಿಸಿದನು:
’ರಾಜಕಾರಣಿಗಳು ತಾವು ಮಾಡಿದ ಪಾಪಗಳಿಗೆ ಭೂಲೋಕದಲ್ಲಿ ಯಾವುದೇ ಶಿಕ್ಷೆಯನ್ನು ಅನುಭವಿಸದೇ ಹಾಯಾಗಿ ಮಜಾಮಾಡಿಕೊಂಡಿದ್ದು ಕೊನೆಗೆ ನರಕಕ್ಕೆ ಬರುತ್ತರಾದ್ದರಿಂದ ನರಕದಲ್ಲಿ ಅವರಿಗೆ ನಾನಾ ಬಗೆಯ ಶಿಕ್ಷೆಗಳನ್ನು ಕೊಡುವ ಅವಶ್ಯಕತೆಯಿದೆ. ಭೂಲೋಕದಿಂದ ಬರುವ ರಾಜಕಾರಣಿಗಳ ಸಂಖ್ಯೆಯೂ ಬರಬರುತ್ತ ಏರತೊಡಗಿದೆ. ಆದ್ದರಿಂದ ಅವರಿಗಾಗಿಯೇ ವಿಶೇಷ ಘಟಕವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಲದ ಭಾರತೀಯ ಯುಗಾದಿಯ ಮುನ್ನಾದಿನವಾದ ಅಮಾವಾಸ್ಯೆಯ ರಾತ್ರಿ ಹನ್ನೆರಡಕ್ಕೆ ಘಟಕದ ಉದ್ಘಾಟನೆ’, ಎಂದು ನರಕದ ವಕ್ತಾರನು ಪತ್ರಕರ್ತರಿಗೆ ವಿವರಿಸಿದನು.
’ಭೂಲೋಕದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಇಲ್ಲಿ ಯಾವ ರೀತಿಯ ಶಿಕ್ಷೆಗಳನ್ನು ಕೊಡುತ್ತೀರಿ?’ ಎಂದು ಇಂಗ್ಲಿಷ್ ದೃಶ್ಯಮಾಧ್ಯಮವೊಂದರ ಪ್ರತಿನಿಧಿ ಕೇಳಿದಳು. (ಅವಳ ಹೆಸರು ಬುರ್ಖಾ ದತ್.)
’ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಯಾವ ಶಿಕ್ಷೆಯನ್ನೂ ಇಲ್ಲಿ ನೀಡಲಾಗುವುದಿಲ್ಲ. ಏಕೆಂದರೆ ನೀತಿಸಂಹಿತೆ ಉಲ್ಲಂಘನೆಗಾಗಿ ಅವರೆಲ್ಲ ಭೂಲೋಕದಲ್ಲೇ ಚುನಾವಣಾ ಆಯೋಗದ ಕೈಲಿ ತಕ್ಕ ಶಿಕ್ಷೆ ಅನುಭವಿಸಿಯೇ ಬಂದಿರುತ್ತಾರೆ. ಆದ್ದರಿಂದ ಅದಕ್ಕಾಗಿ ಇಲ್ಲಿ ಪುನಃ ಶಿಕ್ಷೆ ಕೊಡುವ ಅಗತ್ಯವಿಲ್ಲ’, ಎಂದು ನರಕದ ವಕ್ತಾರನು ಉತ್ತರಿದನು.
ಅತ್ತ ಸ್ವರ್ಗದ ಪತ್ರಿಕಾಗೋಷ್ಠಿಯಲ್ಲಿ ಸ್ವರ್ಗದ ವಕ್ತಾರನು ಹೇಳಿದ್ದಿಷ್ಟು:
’ಈ ಸಲದ ಭಾರತೀಯ ಯುಗಾದಿಯ ಆರಂಭದ ಶುಭಗಳಿಗೆಯಾದ ರಾತ್ರಿ ಹನ್ನೆರಡು ಗಂಟೆ, ಒಂದು ಸೆಕೆಂಡಿಗೆ ನಮ್ಮ ವಿಶೇಷ ಘಟಕದ ಉದ್ಘಾಟನೆ. ತಮ್ಮ ನ್ಯಾಯಬದ್ಧ ಬೇಡಿಕೆಗಳನ್ನು ಹಿಡಿದುಕೊಂಡು ಸರ್ಕಾರಿ ಕಚೇರಿಗಳಿಗೆ ಅಥವಾ/ಮತ್ತು ರಾಜಕಾರಣಿಗಳ ಬಳಿಗೆ ಓಡಾಡಿ ಓಡಾಡಿ ಓಡಾಡಿ ಬೇಸತ್ತು ಸತ್ತು ಇಲ್ಲಿಗೆ ಬರುವ ಬಡಪಾಯಿಗಳಿಗೆ ವಿಶೇಷ ಸುಖ-ಸೌಲತ್ತುಗಳನ್ನು ನೀಡುವ ಮೂಲಕ ನ್ಯಾಯ ದೊರಕಿಸಿಕೊಡಲಿಕ್ಕಾಗಿ ಈ ಘಟಕದ ಸ್ಥಾಪನೆ.’
ಆಗ ವರದಾ ನಾಯಕ್ ಎಂಬ ಟಿವಿ ಪತ್ರಕರ್ತೆ ಬಾಲಕಿಯು ಈ ರೀತಿ ಪ್ರಶ್ನೆ ಕೇಳಿದಳು:
’ಮುಖ್ಯಮಂತ್ರಿಗಳ ಜನತಾದರ್ಶನದ ಬಲೆಗೆ ಬಿದ್ದು ಒದ್ದಾಡಿದ ಮಿಕಗಳಿಗೇನಾದರೂ ವಿಶೇಷ ಸುಖ-ಸೌಲತ್ತುಗಳಿವೆಯೆ?’
ವಕ್ತಾರನ ಉತ್ತರ:
’ಖಂಡಿತ ಖಂಡಿತ. ಇಲ್ಲದಿದ್ದರೆ ಹೇಗೆ?’
ಮೇಲಿನ ಎರಡೂ ಪತ್ರಿಕಾಗೋಷ್ಠಿಗಳಿಗೆ (ಊಹ್ಞೂಂ, ಒಂದು ಮೇಲಿನ ಮತ್ತು ಇನ್ನೊಂದು ಕೆಳಗಿನ ಪತ್ರಿಕಾಗೋಷ್ಠಿಗೆ) ಹೋಗಿಬಂದ ಪತ್ರಕರ್ತರನ್ನು ಗುಳಿಗೆಪ್ಪನವರು ವಿಚಾರಿಸಿದಾಗ ಒಂದು ಆಶ್ಚರ್ಯಕರ ಸಂಗತಿ ಹೊರಬಿತ್ತು!
ಸದಾಕಾಲ ಮೃಷ್ಟಾನ್ನಭೋಜನವನ್ನೇ ಉಂಡು ಉಂಡು ನಾಲಗೆ ಜಡ್ಡು ಹಿಡಿಸಿಕೊಂಡಿದ್ದ ಸ್ವರ್ಗದ ವ್ಯವಸ್ಥಾಪಕರು ಇದೇ ಅವಕಾಶವೆಂದು ಪತ್ರಿಕಾಗೋಷ್ಠಿಯಲ್ಲಿ ಸಖ್ಖತ್ ಖಾರದ ಅಡುಗೆ (ಅಂದರೆ ಎನ್.ವಿ. ಅಲ್ಲ) ಮಾಡಿಸಿದ್ದರಂತೆ! ’ಯಮ’ಖಾರವಂತೆ! ಅದೇವೇಳೆ ನರಕದಲ್ಲಿ, ಇದೇ ಚಾನ್ಸ್ ಎಂದು ಅಲ್ಲಿನ ವ್ಯವಸ್ಥಾಪಕರು ಬಗೆಬಗೆಯ ಭಕ್ಷ್ಯಭೋಜ್ಯಗಳ ಭೂರಿಭೋಜನದ ಏರ್ಪಾಟು ಮಾಡಿದ್ದರಂತೆ!
ಇನ್ನೊಂದು ವಿಷಯವೆಂದರೆ, ಬಹುಪಾಲು ನಟನಟಿಯರು, ಜನನಾಯಕರು, ರೂಪದರ್ಶಿಯರು ಇತ್ಯಾದಿಯವರೆಲ್ಲ ನರಕದಲ್ಲೇ ಇದ್ದರಂತೆ! ಪತ್ರಕರ್ತರಿಗೆ ಅವರನ್ನೆಲ್ಲ ಕಾಣುವ ಅವಕಾಶ ದೊರಕಿತಂತೆ. ಸ್ವರ್ಗದಲ್ಲೋ, ಅಪ್ಪಟ ಗಾಂಧಿವಾದಿಗಳು, ನಿಜಸನ್ಯಾಸಿಗಳು, ಮುಗ್ಧರು, ಭೂಲೋಕದಲ್ಲಿ ನಾನಾ ಬಗೆಯ ಶೋಷಣೆಗೊಳಗಾದವರು ಇಂಥವರೇ ತುಂಬಿದ್ದರಂತೆ.
ಸ್ವರ್ಗಕ್ಕೆ ಹೋಗಿಬಂದ ಪತ್ರಕರ್ತರೀಗ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ!
ಬುಧವಾರ, ಮಾರ್ಚ್ 25, 2009
’ಕೈ’-’ಲಾಗ’-ದವರು
ಇವತ್ತಿನ ಪತ್ರಿಕೆಗಳನ್ನು ನೋಡಿದಿರಾ?
’ಕೈ’ ಲಾಗದ ಇಬ್ಬರು ವೃದ್ಧರು ಪರಸ್ಪರ ಅದೇನನ್ನೋ ಹೇಳಲು-ಕೇಳಲು ಒದ್ದಾಡುತ್ತಿರುವ ಫೋಟೋ ಗಮನಿಸಿದಿರಾ?
ಗಾಲಿ ಕುರ್ಚಿ ಬಿಟ್ಟು ಎದ್ದೇಳಲಾರದ ಅರ್ಜುನಸಿಂಗರು, ’ಕಿವಿ ಸ್ವಲ್ಪ ದೂರ’ (pun intended) ಇರುವ ಪ್ರಣವ ಮುಖರ್ಜಿಗೆ ಏನನ್ನೋ ಹೇಳಲು ತಮ್ಮ ಮುಖ ಮುಂದೆಚಾಚಿ ಒದ್ದಾಡುತ್ತಿರುವರು; ಅದನ್ನು ಕೇಳಿಸಿಕೊಳ್ಳಲು ಪ್ರಣವರು ತಮ್ಮ ಕಿವಿಗೆ ಕೈ ಅಡ್ಡ ಇಟ್ಟುಕೊಂಡು ಒದ್ದಾಡುತ್ತಿರುವರು!
ಹಿಂದೆ ಕುಳಿತ ನಮ್ಮ ಬಿ.ಕೆ.ಹರಿಪ್ರಸಾದರು ಇದನ್ನು ನೋಡಿ ಮುಖ ಎತ್ತಿ ನಗುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೊಂದು ಫೋಟೋ ಗಮನಿಸಿದಿರಾ?
ವಯಸ್ಸಾಗಿದ್ದರೂ ತಾನು ನಡೆದಾಡಬಲ್ಲೆ, ತನಗೆ ಚುನಾವಣಾ ಟಿಕೆಟ್ ಬೇಕು, ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಯ ಮನೆಯವರೆಗೆ ಪಾದಯಾತ್ರೆಗೈದು ತೋರಿಸಲು ಬಿಹಾರಕ್ಕೆ ಬಂದಿಳಿದ ಜಾರ್ಜ್ ಫರ್ನಾಂಡಿಸರು ವಿಮಾನ ನಿಲ್ದಾಣದಲ್ಲಿ ದಿಗ್ವಿಜಯಸಿಂಗರ ನೆರವಿನಿಂದ ನಡೆಯುತ್ತಿರುವರು! ನಡೆದಾಡಲೂ ಕಷ್ಟಪಡುವ ಇವರು ತಾನು ಸುದೃಢವಾಗಿರುವೆನೆಂದು ತೋರಿಸಿಕೊಳ್ಳಲು ’ಲಾಗ’ಹಾಕುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೂ ಒಂದು ಫೋಟೋ ನೋಡಿದಿರಾ?
83ರ ಹರಯದ ’ಎವರ್ ಗ್ರೀನ್ ಹೀರೊ’ ದೇವಾನಂದ್ ’ಚಾರ್ಜ್ಶೀಟ್’ ಸಲ್ಲಿಸುತ್ತಿರುವ ಫೋಟೋ! ಅರ್ಥಾತ್ ತನ್ನ ಮುಂಬರುವ ಚಿತ್ರ ’ಚಾರ್ಜ್ಶೀಟ್’ ಬಗ್ಗೆ ಮಾತನಾಡುತ್ತಿರುವ ಫೋಟೋ.
ಕಾರುಬಾರು ನೋಡಿದರೆ ಪ್ರಣವ್, ದೇವಾನಂದ್ ಓಕೆ; ಅರ್ಜುನ್, ಜಾರ್ಜ್ (ಇನ್ನೂ) ಯಾಕೆ?
ವಾಜಪೇಯಿಯಹಾಗೆ ಡೀಸೆಂಟಾಗಿ ಮನೇರಿಲೋಕಾಗೋಲ್ವೆ?
ಈ ಅ(ರ್ಜುನ್)ಜಾ(ರ್ಜ್)ರಿಷ್ಟರ ಸಾಲಿಗೆ ಮಹಾ-ದ್ರಾವಿಡ ವೃದ್ಧ (ಕರುಣಾ)ನಿಧಿಯನ್ನೂ ಮತ್ತು ಮಹಾ-ರಾಷ್ಟ್ರೀಯ(ವಾದಿ) ಬಾಳ್ ಠಾಕ್ರೆಯನ್ನೂ ಸೇರಿಸಬಹುದಷ್ಟೆ.
(ನಡೆಯೋದು ನೋಡಿದರೆ, ’ರಾಮ)ರಾಮಾ!’ಈಶ್ವರ ಠಾಕೂರ್ ಏನು ಕಮ್ಮಿಯೇ?
ರಾಮೇಶ್ವರ ಠಾ’ಕೂರ’ರಿಗೆ ಕೂರಲೂ ಕಷ್ಟ, ಏಳಲೂ ಕಷ್ಟ!
ನಮ್ಮ ದೇವೇಗೌಡರೂ ರೇಸ್ನಲ್ಲಿದ್ದಾರಾದರೂ ಸಂಪೂರ್ಣ ಅರ್ಹತೆ ಇನ್ನೂ ಪಡೆದಿಲ್ಲ; ಪಡೆಯುವುದೂ ಬೇಡವೆಂಬುದು ನಮ್ಮ ಹಾರೈಕೆ. (ಏಕೆಂದರೆ, ಇದು ಓಡಲಾರದವರ-ಓಡಾಡಲಾರದವರ ರೇಸ್ ತಾನೆ.)
ರೇಸಿಗರ ಪಟ್ಟಿ ಇನ್ನೂ ಉದ್ದವಿದೆ.
ಹೇಸಿಗೆ ಹುಟ್ಟುವಷ್ಟು ಒದ್ದಾಟ ಮಾಡಿಕೊಂಡು ಅಧಿಕಾರದ ರೇಸಿಗೆ ಇಳಿಯುವ ಈ ’ಕೈ’-’ಲಾಗ’ದ ವಯೋವೃದ್ಧರನ್ನು ಕಂಡು ಅಯ್ಯೋ ಅನ್ನಬೇಕೆನ್ನಿಸುತ್ತದೆ. ಆದರೆ ನಾನು ಅನ್ನುವುದಿಲ್ಲ. ಏಕೆಂದರೆ, ಅಧಿಕಾರದ ಗದ್ದುಗೆ ಏರಿ(!) ಇವರು ಸುದ್ದಿಯಲ್ಲಿದ್ದುಕೊಂಡು ಆರಾಮಾಗಿ ನಿದ್ದೆಹೋಗುತ್ತಾರೆ; ಇಂಥವರ ಆಳ್ವಿಕೆಯಿಂದ ಅನುಭವಿಸುವುದು ಪ್ರಜೆಗಳಾದ ನಾವು.
ನಮ್ಮ ಬಗ್ಗೆಯೂ ಯಾರೂ ಅಯ್ಯೋ ಅನ್ನಬೇಕಾದ್ದಿಲ್ಲ. ಏಕೆಂದರೆ, ಇಂಥವರನ್ನು ಆರಿಸಿ ಕಳಿಸುವುದೇ/ಇಂಥವರ ಅಧಿಕಾರ ಚಲಾವಣೆಗೆ ಅನುವು ಮಾಡಿಕೊಡುವುದೇ ನಾವು ತಾನೆ?
ಆದ್ದರಿಂದ, ಮಾಡಿದ್ದುಣ್ಣೋ ಮಹರಾಯ!
’ಕೈ’ ಲಾಗದ ಇಬ್ಬರು ವೃದ್ಧರು ಪರಸ್ಪರ ಅದೇನನ್ನೋ ಹೇಳಲು-ಕೇಳಲು ಒದ್ದಾಡುತ್ತಿರುವ ಫೋಟೋ ಗಮನಿಸಿದಿರಾ?
ಗಾಲಿ ಕುರ್ಚಿ ಬಿಟ್ಟು ಎದ್ದೇಳಲಾರದ ಅರ್ಜುನಸಿಂಗರು, ’ಕಿವಿ ಸ್ವಲ್ಪ ದೂರ’ (pun intended) ಇರುವ ಪ್ರಣವ ಮುಖರ್ಜಿಗೆ ಏನನ್ನೋ ಹೇಳಲು ತಮ್ಮ ಮುಖ ಮುಂದೆಚಾಚಿ ಒದ್ದಾಡುತ್ತಿರುವರು; ಅದನ್ನು ಕೇಳಿಸಿಕೊಳ್ಳಲು ಪ್ರಣವರು ತಮ್ಮ ಕಿವಿಗೆ ಕೈ ಅಡ್ಡ ಇಟ್ಟುಕೊಂಡು ಒದ್ದಾಡುತ್ತಿರುವರು!
ಹಿಂದೆ ಕುಳಿತ ನಮ್ಮ ಬಿ.ಕೆ.ಹರಿಪ್ರಸಾದರು ಇದನ್ನು ನೋಡಿ ಮುಖ ಎತ್ತಿ ನಗುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೊಂದು ಫೋಟೋ ಗಮನಿಸಿದಿರಾ?
ವಯಸ್ಸಾಗಿದ್ದರೂ ತಾನು ನಡೆದಾಡಬಲ್ಲೆ, ತನಗೆ ಚುನಾವಣಾ ಟಿಕೆಟ್ ಬೇಕು, ಎಂದು ಹೇಳಿ, ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿಯ ಮನೆಯವರೆಗೆ ಪಾದಯಾತ್ರೆಗೈದು ತೋರಿಸಲು ಬಿಹಾರಕ್ಕೆ ಬಂದಿಳಿದ ಜಾರ್ಜ್ ಫರ್ನಾಂಡಿಸರು ವಿಮಾನ ನಿಲ್ದಾಣದಲ್ಲಿ ದಿಗ್ವಿಜಯಸಿಂಗರ ನೆರವಿನಿಂದ ನಡೆಯುತ್ತಿರುವರು! ನಡೆದಾಡಲೂ ಕಷ್ಟಪಡುವ ಇವರು ತಾನು ಸುದೃಢವಾಗಿರುವೆನೆಂದು ತೋರಿಸಿಕೊಳ್ಳಲು ’ಲಾಗ’ಹಾಕುತ್ತಿರುವರು!
ಇವತ್ತಿನ ಪತ್ರಿಕೆಗಳಲ್ಲೇ ಇನ್ನೂ ಒಂದು ಫೋಟೋ ನೋಡಿದಿರಾ?
83ರ ಹರಯದ ’ಎವರ್ ಗ್ರೀನ್ ಹೀರೊ’ ದೇವಾನಂದ್ ’ಚಾರ್ಜ್ಶೀಟ್’ ಸಲ್ಲಿಸುತ್ತಿರುವ ಫೋಟೋ! ಅರ್ಥಾತ್ ತನ್ನ ಮುಂಬರುವ ಚಿತ್ರ ’ಚಾರ್ಜ್ಶೀಟ್’ ಬಗ್ಗೆ ಮಾತನಾಡುತ್ತಿರುವ ಫೋಟೋ.
ಕಾರುಬಾರು ನೋಡಿದರೆ ಪ್ರಣವ್, ದೇವಾನಂದ್ ಓಕೆ; ಅರ್ಜುನ್, ಜಾರ್ಜ್ (ಇನ್ನೂ) ಯಾಕೆ?
ವಾಜಪೇಯಿಯಹಾಗೆ ಡೀಸೆಂಟಾಗಿ ಮನೇರಿಲೋಕಾಗೋಲ್ವೆ?
ಈ ಅ(ರ್ಜುನ್)ಜಾ(ರ್ಜ್)ರಿಷ್ಟರ ಸಾಲಿಗೆ ಮಹಾ-ದ್ರಾವಿಡ ವೃದ್ಧ (ಕರುಣಾ)ನಿಧಿಯನ್ನೂ ಮತ್ತು ಮಹಾ-ರಾಷ್ಟ್ರೀಯ(ವಾದಿ) ಬಾಳ್ ಠಾಕ್ರೆಯನ್ನೂ ಸೇರಿಸಬಹುದಷ್ಟೆ.
(ನಡೆಯೋದು ನೋಡಿದರೆ, ’ರಾಮ)ರಾಮಾ!’ಈಶ್ವರ ಠಾಕೂರ್ ಏನು ಕಮ್ಮಿಯೇ?
ರಾಮೇಶ್ವರ ಠಾ’ಕೂರ’ರಿಗೆ ಕೂರಲೂ ಕಷ್ಟ, ಏಳಲೂ ಕಷ್ಟ!
ನಮ್ಮ ದೇವೇಗೌಡರೂ ರೇಸ್ನಲ್ಲಿದ್ದಾರಾದರೂ ಸಂಪೂರ್ಣ ಅರ್ಹತೆ ಇನ್ನೂ ಪಡೆದಿಲ್ಲ; ಪಡೆಯುವುದೂ ಬೇಡವೆಂಬುದು ನಮ್ಮ ಹಾರೈಕೆ. (ಏಕೆಂದರೆ, ಇದು ಓಡಲಾರದವರ-ಓಡಾಡಲಾರದವರ ರೇಸ್ ತಾನೆ.)
ರೇಸಿಗರ ಪಟ್ಟಿ ಇನ್ನೂ ಉದ್ದವಿದೆ.
ಹೇಸಿಗೆ ಹುಟ್ಟುವಷ್ಟು ಒದ್ದಾಟ ಮಾಡಿಕೊಂಡು ಅಧಿಕಾರದ ರೇಸಿಗೆ ಇಳಿಯುವ ಈ ’ಕೈ’-’ಲಾಗ’ದ ವಯೋವೃದ್ಧರನ್ನು ಕಂಡು ಅಯ್ಯೋ ಅನ್ನಬೇಕೆನ್ನಿಸುತ್ತದೆ. ಆದರೆ ನಾನು ಅನ್ನುವುದಿಲ್ಲ. ಏಕೆಂದರೆ, ಅಧಿಕಾರದ ಗದ್ದುಗೆ ಏರಿ(!) ಇವರು ಸುದ್ದಿಯಲ್ಲಿದ್ದುಕೊಂಡು ಆರಾಮಾಗಿ ನಿದ್ದೆಹೋಗುತ್ತಾರೆ; ಇಂಥವರ ಆಳ್ವಿಕೆಯಿಂದ ಅನುಭವಿಸುವುದು ಪ್ರಜೆಗಳಾದ ನಾವು.
ನಮ್ಮ ಬಗ್ಗೆಯೂ ಯಾರೂ ಅಯ್ಯೋ ಅನ್ನಬೇಕಾದ್ದಿಲ್ಲ. ಏಕೆಂದರೆ, ಇಂಥವರನ್ನು ಆರಿಸಿ ಕಳಿಸುವುದೇ/ಇಂಥವರ ಅಧಿಕಾರ ಚಲಾವಣೆಗೆ ಅನುವು ಮಾಡಿಕೊಡುವುದೇ ನಾವು ತಾನೆ?
ಆದ್ದರಿಂದ, ಮಾಡಿದ್ದುಣ್ಣೋ ಮಹರಾಯ!
ಸೋಮವಾರ, ಮಾರ್ಚ್ 23, 2009
ಕಾನೂನಿನ ಕತ್ತು
ಕಾನೂನು ರಚಿಸುವ ಜನಪ್ರತಿನಿಧಿಗಳಿಗೆ
ಕಾನೂನು ಗೊತ್ತು.
ಕಾನೂನು ರಕ್ಷಿಸುವ ಆರಕ್ಷಕರಿಗೆ
ಕಾನೂನು ಗೊತ್ತು.
ಕಾನೂನು ವಾದಿಸುವ ವಕೀಲರಿಗೆ
ಕಾನೂನು ಗೊತ್ತು.
ಆದರೆ, ಅಯ್ಯೋ!
ಇವರು ಮೂವರಿಂದಲೇ
ಇಂದಿನ ದಿನಗಳಲ್ಲಿ
ಕಾನೂನಿಗೆ ಕುತ್ತು!
ಕಾನೂನು ಗೊತ್ತು.
ಕಾನೂನು ರಕ್ಷಿಸುವ ಆರಕ್ಷಕರಿಗೆ
ಕಾನೂನು ಗೊತ್ತು.
ಕಾನೂನು ವಾದಿಸುವ ವಕೀಲರಿಗೆ
ಕಾನೂನು ಗೊತ್ತು.
ಆದರೆ, ಅಯ್ಯೋ!
ಇವರು ಮೂವರಿಂದಲೇ
ಇಂದಿನ ದಿನಗಳಲ್ಲಿ
ಕಾನೂನಿಗೆ ಕುತ್ತು!
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
