* ಬಿಜೆಪಿ ನೇತೃತ್ವದ ಎನ್ಡಿಎ ದಿಢೀರನೆ ಒಗ್ಗಟ್ಟು ಪ್ರದರ್ಶಿಸ್ತಾ ಇದೆ! ಮುಂದೆ?
- ರಾಷ್ಟ್ರಮಟ್ಟದಲ್ಲಿ ’ಆಪರೇಷನ್ ಕಮಲ್’!
+++
* ’ಆಪರೇಷನ್ ಕಮಲ’ದಿಂದ ಜನತೆಗೆ ಏನು ಲಾಭ?
- (ಕಮಲದ) ದಂಟು!
ನಾಗರಿಕರಿಗೆ ಬೇಕಾಗಿರೋದು ಸರ್ಕಾರಿ ಅಧಿಕಾರಿಗಳ ಕೋ-ಆಪರೇಷನ್.
ಬಡವರಿಗೆ ಬೇಕಾಗಿರೋದು ರೇಷನ್.
+++
* ಬಿಜೆಪಿ ಪರವಾಗಿ ಮಾತನಾಡುವ ಮಠಾಧೀಶರು ಭಕ್ತರಿಗೆ ಆಶೀರ್ವಾದ ಮಾಡುವಾಗ ’ಹಸ್ತ’ ತೋರಿಸುತ್ತಾರಲ್ಲಾ?!
- ಮತ್ತೇನು, ಕೈಯಲ್ಲಿ ಕಮಲ ಹಿಡಕೊಂಡು ಆಶೀರ್ವಾದ ಮಾಡಬೇಕೇ?
+++
* ಪಕ್ಷದಿಂದ ವಜಾ ಆದರೆ ಅಮರ್ ಸಿಂಗ್ ಆಗ ಏನು ಮಾಡುತ್ತಾರೆ?
- ದಂಡಿಯಾಗಿ ದುಡ್ಡೂ ಇದೆ, ಕೆಲ್ಸಾನೂ ಇಲ್ಲ, ಅಮಿತಾಭ್ ಬಚ್ಚನ್ನ ಫುಲ್ ಫ್ಯಾಮಿಲಿ ಹಾಕ್ಕೊಂಡು ಸಿನಿಮಾ ತೆಗೀತಾರೆ! ಜಯಪ್ರದಾಗೆ ವಿಶೇಷ ಪಾತ್ರ.
+++
* ಶ್ರೀಲಂಕಾದಲ್ಲಿ ತಮಿಳು ನಿರಾಶ್ರಿತರಿಗೆ ಸುಲಿಗೆಕೋರರ ಹಾವಳಿಯಂತೆ?
- ಬರಗಾಲದಲ್ಲಿ ಅಧಿಕಮಾಸ, ಪಾಪ!
+++
* ಐಪಿಎಲ್ನಲ್ಲಿ ’Knight riders’ಗೆ ಎಂಥಾ ದುರ್ಗತಿ ಬಂತಲ್ಲಾ ಗುರುವೇ!
- Nightನಲ್ಲಿ ಯಾವುದಾದರೂ ವೆಹಿಕಲ್ ride ಮಾಡ್ಕೊಂಡು ಫುಲ್ ಟೀಮು ಎಲ್ಲಿಗಾದರೂ ಓಡಿಹೋಗೋದು ವಾಸಿ, ಅಲ್ವೆ ಶಿಷ್ಯಾ?
+++
* ಛಾಯಾಗ್ರಾಹಕರನ್ನು ಓಡಿಸೋಕಂತ ರೂಪದರ್ಶಿ ಲಿಂಡ್ಸೆ ಲೋಹನ್ ತನ್ನ ಮನೆಮೇಲಿನಿಂದ ಅವರತ್ತ ಮೊಟ್ಟೆ, ಪಿಜ್ಜಾ ಎಸೆದಳಂತೆ!
- ಅವನ್ನು ತಾನೇ ತಿಂದು ಕೆಳಗಿನಿಂದ ಒಂದು ವಾಯುಬಾಣ ಬಿಟ್ಟಿದ್ದರೆ ಛಾಯಾಗ್ರಾಹಕರೆಲ್ಲ ಒಂದೇ ಉಸಿರಿಗೆ ಮೂಗು ಮುಚ್ಚಿಕೊಂಡು ಪರಾರಿಯಾಗ್ತಿದ್ದರು!
+++
* ಇಡೀ ರಾತ್ರಿ ನಿದ್ದೆಮಾಡೋಕಾಗೋಲ್ಲ; ಮನೆ ಹೊರಗಡೆ ಬೀದಿನಾಯಿ ಗಟ್ಟಿಯಾಗಿ ಬೊಗಳ್ತಾ ಇರುತ್ತೆ!
- ಇಡೀ ರಾತ್ರಿ ನಿದ್ದೆಮಾಡ್ತೀಯಾ? ಎಂಥಾ ಅರಸಿಕ ನೀನು!
+++
* ಎಲ್ಲಾ ಬೋಗಸ್ ಪ್ರಶ್ನೆಗಳನ್ನೇ ಹಾಕ್ಕೊಳ್ತೀಯಲ್ಲಾ!
- ಸದ್ಯ! ಬೋಗಸ್ ಉತ್ತರ ಅನ್ನಲಿಲ್ಲವಲ್ಲಾ, ನಾನು ಬಚಾವು!
--೦--
operation ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
operation ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಸೋಮವಾರ, ಮೇ 11, 2009
ಭಾನುವಾರ, ಮೇ 3, 2009
ಬೆರಳ್ನ ತಿರುಳ್
ಲೋಕಸಭಾ ಚುನಾವಣೆಯ ಮತದಾನದ ಗುರುತಿನ ಶಾಯಿಯನ್ನು ಕೆಲ ಗಣ್ಯರು ಬೇರೆ ಬೆರಳುಗಳಿಗೆ ಹಚ್ಚಿಸಿಕೊಂಡದ್ದಕ್ಕೆ ಕಾರಣಗಳನ್ನು ಈ ಕೆಳಗೆ ಬಯಲುಗೊಳಿಸಲಾಗಿದೆ.
ಬಲಪಂಥೀಯ ಯಡಿಯೂರಪ್ಪನವರು ಪಕ್ಷದ ಬಲವರ್ಧನೆಗಾಗಿ ಬಲಮುರಿ ಗಣಪತಿ ದೇವಸ್ಥಾನದ ಅರ್ಚಕರ ಸಲಹೆಯಂತೆ ಹಾಗೂ ತಮ್ಮ ಬಲಗೈ ಬಂಟ ಮುಜರಾ(ಯಿ) ಸಚಿವ ಕೃಷ್ಣಯ್ಯ ಶೆಟ್ಟರ ಸೂಚನೆಯಂತೆ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿದ್ದಾರೆ. ತಮ್ಮ ಹೆಸರನ್ನು ಹಲವರು ’ಎಡ’ಯೂರಪ್ಪ ಎಂದು ಉಚ್ಚರಿಸುವುದರಿಂದ ಅದನ್ನು ’ಬಲ’ಯೂರಪ್ಪ ಎಂದು ಬದಲಿಸಿಕೊಳ್ಳುವ ಆಲೋಚನೆಯೂ ಮಾನ್ಯ ಮುಖ್ಯಮಂತ್ರಿಗಳಿಗಿದೆಯಂತೆ. ಅವರ ಸುಪುತ್ರ ರಾಘವೇಂದ್ರ ಮಾತ್ರ ಮಾಡರ್ನ್ ಗೈ ಆಗಿರುವುದರಿಂದ ಎಡಗೈ ಬೆರಳಿಗೇ ಶಾಯಿ ಹಚ್ಚಿಸಿಕೊಂಡಿದ್ದಾನೆ.
ಅಮಿತಾಭ್ ಬಚ್ಚನ್ನ ಪೂರಾ ಕುಟುಂಬವೇ ತೋರು ಬೆರಳಿನ ಬದಲು ಮಧ್ಯಬೆರಳಿಗೆ ಶಾಯಿ ಹಚ್ಚಿಸಿಕೊಂಡಿದೆ. ಏಕೆಂದರೆ, ಆ ಕುಟುಂಬವು ಸದಾ ’ಸೆಂಟರ್’ ಆಫ್ ಅಟ್ರ್ಯಾಕ್ಷನ್ ಆಗಿರಬಯಸುತ್ತದೆ.
’ನಾನೇನು ಕಮ್ಮಿ? ನಾನೂ ಅಷ್ಟೇಯ’, ಎಂದು ಅಮೀರ್ ಖಾನ್ ಕೂಡ ’ಸೆಂಟರ್’ ಫಿಂಗರಿಗೆ ಶಾಯಿ ಹಚ್ಚಿಸಿಕೊಂಡಿದ್ದಾನೆ.
(ಬಚ್ಚನ್ ಕುಟುಂಬವು ಕ್ಯಾಮೆರಾಗಳಿಗೆ ಮಧ್ಯಬೆರಳನ್ನು ಚಾಚಿ ತೋರಿಸುತ್ತಿರುವ ಚಿತ್ರವನ್ನು ಪತ್ರಿಕೆಗಳಲ್ಲಿ ಕಂಡು ಅಮೆರಿಕದ ಕೆಲ ಎನ್ನಾರೈ ಸಂಘಟನೆಗಳು ’ಛೀಛೀ’ ಎಂದು ಅಸಹ್ಯಪಟ್ಟುಕೊಂಡಿವೆಯೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.)
ಈ ನಡುವೆ, ಬಲಪಂಥೀಯ ಅಡ್ವಾಣಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಸಾರಾಭಾಯ್ ಕೂಡ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮಲ್ಲಿಕಾ ಅವರು ’ಆಪರೇಷನ್ ಕಮಲ’ಕ್ಕೆ ಬಲಿಯಾಗಲಿದ್ದಾರೆಯೇ ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ಹುಟ್ಟಿಕೊಂಡಿದೆ. ಆದರೆ, ಮಲ್ಲಿಕಾ ಅವರ ಪುತ್ರಿ ಅನಾಹಿತಾ, ’ಹಾಗೇನಿಲ್ಲ, ನಮ್ಮಮ್ಮ ಕೂಚಿಪುಡಿ-ಭರತನಾಟ್ಯಗಳಲ್ಲೇ ಜೀವನ ಕಳೆದದ್ದರಿಂದ ಅವರಿಗೆ ಯಾವ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ, ಹಾಗಾಗಿ ಪರಪಾಟಾಯಿತು, ಅಷ್ಟೆ’, ಎಂದು ಪತ್ರಿಕಾ ಹೇಳಿಕೆ ನೀಡುವ ಮೂಲಕ ವಿಷಯವನ್ನು ತಿಳಿಗೊಳಿಸಲೆತ್ನಿಸಿದ್ದಾರೆ.
ಎಲ್ಲರಿಗಿಂತ ಬುದ್ಧಿವಂತರೆಂದರೆ ನರೇಂದ್ರ ಮೋದಿ. ಮಾಧ್ಯಮಗಳ ಕ್ಯಾಮೆರಾಗಳಿಗೆ ಶಾಯಿಯ ಬೆರಳನ್ನು ತೋರಿಸುವ ನೆಪದಲ್ಲಿ ಮೋದಿಯು ಪಕ್ಕದ ಬೆರಳನ್ನೂ ಜೊತೆಗೆ ಚಾಚಿ ವಿಜಯದ ಸಂಕೇತವನ್ನೂ (ಹಿಂದುಮುಂದಾಗಿ) ಬೀರಿಬಿಟ್ಟಿದ್ದಾರೆ! ಫಲಿತಾಂಶಕ್ಕೆ ಮುನ್ನವೇ ಜನರನ್ನು ಈ ರೀತಿ ಮೋಡಿ ಮಾಡಲೆತ್ನಿಸುವ ಮೋದಿಯ ಮಿದುಳೆಂದರೆ ಸಾಮಾನ್ಯವೆ?!
ಬಲಪಂಥೀಯ ಯಡಿಯೂರಪ್ಪನವರು ಪಕ್ಷದ ಬಲವರ್ಧನೆಗಾಗಿ ಬಲಮುರಿ ಗಣಪತಿ ದೇವಸ್ಥಾನದ ಅರ್ಚಕರ ಸಲಹೆಯಂತೆ ಹಾಗೂ ತಮ್ಮ ಬಲಗೈ ಬಂಟ ಮುಜರಾ(ಯಿ) ಸಚಿವ ಕೃಷ್ಣಯ್ಯ ಶೆಟ್ಟರ ಸೂಚನೆಯಂತೆ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿದ್ದಾರೆ. ತಮ್ಮ ಹೆಸರನ್ನು ಹಲವರು ’ಎಡ’ಯೂರಪ್ಪ ಎಂದು ಉಚ್ಚರಿಸುವುದರಿಂದ ಅದನ್ನು ’ಬಲ’ಯೂರಪ್ಪ ಎಂದು ಬದಲಿಸಿಕೊಳ್ಳುವ ಆಲೋಚನೆಯೂ ಮಾನ್ಯ ಮುಖ್ಯಮಂತ್ರಿಗಳಿಗಿದೆಯಂತೆ. ಅವರ ಸುಪುತ್ರ ರಾಘವೇಂದ್ರ ಮಾತ್ರ ಮಾಡರ್ನ್ ಗೈ ಆಗಿರುವುದರಿಂದ ಎಡಗೈ ಬೆರಳಿಗೇ ಶಾಯಿ ಹಚ್ಚಿಸಿಕೊಂಡಿದ್ದಾನೆ.
ಅಮಿತಾಭ್ ಬಚ್ಚನ್ನ ಪೂರಾ ಕುಟುಂಬವೇ ತೋರು ಬೆರಳಿನ ಬದಲು ಮಧ್ಯಬೆರಳಿಗೆ ಶಾಯಿ ಹಚ್ಚಿಸಿಕೊಂಡಿದೆ. ಏಕೆಂದರೆ, ಆ ಕುಟುಂಬವು ಸದಾ ’ಸೆಂಟರ್’ ಆಫ್ ಅಟ್ರ್ಯಾಕ್ಷನ್ ಆಗಿರಬಯಸುತ್ತದೆ.
’ನಾನೇನು ಕಮ್ಮಿ? ನಾನೂ ಅಷ್ಟೇಯ’, ಎಂದು ಅಮೀರ್ ಖಾನ್ ಕೂಡ ’ಸೆಂಟರ್’ ಫಿಂಗರಿಗೆ ಶಾಯಿ ಹಚ್ಚಿಸಿಕೊಂಡಿದ್ದಾನೆ.
(ಬಚ್ಚನ್ ಕುಟುಂಬವು ಕ್ಯಾಮೆರಾಗಳಿಗೆ ಮಧ್ಯಬೆರಳನ್ನು ಚಾಚಿ ತೋರಿಸುತ್ತಿರುವ ಚಿತ್ರವನ್ನು ಪತ್ರಿಕೆಗಳಲ್ಲಿ ಕಂಡು ಅಮೆರಿಕದ ಕೆಲ ಎನ್ನಾರೈ ಸಂಘಟನೆಗಳು ’ಛೀಛೀ’ ಎಂದು ಅಸಹ್ಯಪಟ್ಟುಕೊಂಡಿವೆಯೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.)
ಈ ನಡುವೆ, ಬಲಪಂಥೀಯ ಅಡ್ವಾಣಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾ ಸಾರಾಭಾಯ್ ಕೂಡ ಬಲಗೈ ಬೆರಳಿಗೆ ಶಾಯಿ ಹಚ್ಚಿಸಿಕೊಂಡಿರುವುದು ಕಾಂಗ್ರೆಸ್ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮಲ್ಲಿಕಾ ಅವರು ’ಆಪರೇಷನ್ ಕಮಲ’ಕ್ಕೆ ಬಲಿಯಾಗಲಿದ್ದಾರೆಯೇ ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ಹುಟ್ಟಿಕೊಂಡಿದೆ. ಆದರೆ, ಮಲ್ಲಿಕಾ ಅವರ ಪುತ್ರಿ ಅನಾಹಿತಾ, ’ಹಾಗೇನಿಲ್ಲ, ನಮ್ಮಮ್ಮ ಕೂಚಿಪುಡಿ-ಭರತನಾಟ್ಯಗಳಲ್ಲೇ ಜೀವನ ಕಳೆದದ್ದರಿಂದ ಅವರಿಗೆ ಯಾವ ಬೆರಳಿಗೆ ಶಾಯಿ ಹಚ್ಚಿಸಿಕೊಳ್ಳಬೇಕು ಎಂಬುದು ಗೊತ್ತಿಲ್ಲ, ಹಾಗಾಗಿ ಪರಪಾಟಾಯಿತು, ಅಷ್ಟೆ’, ಎಂದು ಪತ್ರಿಕಾ ಹೇಳಿಕೆ ನೀಡುವ ಮೂಲಕ ವಿಷಯವನ್ನು ತಿಳಿಗೊಳಿಸಲೆತ್ನಿಸಿದ್ದಾರೆ.
ಎಲ್ಲರಿಗಿಂತ ಬುದ್ಧಿವಂತರೆಂದರೆ ನರೇಂದ್ರ ಮೋದಿ. ಮಾಧ್ಯಮಗಳ ಕ್ಯಾಮೆರಾಗಳಿಗೆ ಶಾಯಿಯ ಬೆರಳನ್ನು ತೋರಿಸುವ ನೆಪದಲ್ಲಿ ಮೋದಿಯು ಪಕ್ಕದ ಬೆರಳನ್ನೂ ಜೊತೆಗೆ ಚಾಚಿ ವಿಜಯದ ಸಂಕೇತವನ್ನೂ (ಹಿಂದುಮುಂದಾಗಿ) ಬೀರಿಬಿಟ್ಟಿದ್ದಾರೆ! ಫಲಿತಾಂಶಕ್ಕೆ ಮುನ್ನವೇ ಜನರನ್ನು ಈ ರೀತಿ ಮೋಡಿ ಮಾಡಲೆತ್ನಿಸುವ ಮೋದಿಯ ಮಿದುಳೆಂದರೆ ಸಾಮಾನ್ಯವೆ?!
ಭಾನುವಾರ, ಮಾರ್ಚ್ 22, 2009
ಒಂದು ಓವರ್
-1-
ಹರಿದಾಸರ ಪದ: ’ಹರಿಭಜನೆಯ ಮಾಡಿರೋ..’
ಕಿರಿಕೆಟ್ಟಿಗರ ಪದ: ’ಹರಭಜನನ ಭಜಿಸಿರೋ..’
***
-2-
ಕಿವಿಗಳಿರುವುದು
ಕೇಳಲಿಕ್ಕೆ
ಮತ್ತು
ಸೋಲಲಿಕ್ಕೆ
***
-3-
ಹರಭಜನ್ ಕೈಯಲ್ಲಿ
ಕಿವಿ ಬಜ್ಜಿ!
ಸಚಿನ್ ಕೈಯಲ್ಲಿ
ಅದು ಚಿನ್
ದಿ!
***
-4-
ದೋನಿ ಸಾಗಿದೆ
ಮುಂದೆ ಹೋಗಿದೆ
ದೂರ ತೀರವ ಸೇರಿದೆ
ಬೀಸುಗಾಳಿಗೆ
ಬೀಳುತೇಳುವ
ಬಿಳಿಯರ್ ಮೇಗಡೆ ಹಾದಿದೆ!
***
-5-
ದಡ್ಡ ತಿಪ್ಪೇಶಿ ಕೇಳ್ತಾನೆ,
’ದೋನಿಗೆ ಆಸ್ಕರ್ ಸಿಗುತ್ತಾ?’
ದೊಡ್ಡ ಮಟ್ಟದಲ್ಲೇ ಏರಿದೆ ಪಾಪ
ನೆತ್ತಿಗೆ ಆಸ್ಕರ್ ಪಿತ್ತ!
(ತಪ್ಪು ಮಾಧ್ಯಮಗಳದ್ದು,
ಗೊತ್ತಾ?)
***
-6-
ದೋನಿಯನ್ನು ಸೆಳೆಯಲು
ಆಪರೇಷನ್ ಕಮಲ
ನಡೆದರೆ
ಆಶ್ಚರ್ಯವಿಲ್ಲ
ಹರಿದಾಸರ ಪದ: ’ಹರಿಭಜನೆಯ ಮಾಡಿರೋ..’
ಕಿರಿಕೆಟ್ಟಿಗರ ಪದ: ’ಹರಭಜನನ ಭಜಿಸಿರೋ..’
***
-2-
ಕಿವಿಗಳಿರುವುದು
ಕೇಳಲಿಕ್ಕೆ
ಮತ್ತು
ಸೋಲಲಿಕ್ಕೆ
***
-3-
ಹರಭಜನ್ ಕೈಯಲ್ಲಿ
ಕಿವಿ ಬಜ್ಜಿ!
ಸಚಿನ್ ಕೈಯಲ್ಲಿ
ಅದು ಚಿನ್
ದಿ!
***
-4-
ದೋನಿ ಸಾಗಿದೆ
ಮುಂದೆ ಹೋಗಿದೆ
ದೂರ ತೀರವ ಸೇರಿದೆ
ಬೀಸುಗಾಳಿಗೆ
ಬೀಳುತೇಳುವ
ಬಿಳಿಯರ್ ಮೇಗಡೆ ಹಾದಿದೆ!
***
-5-
ದಡ್ಡ ತಿಪ್ಪೇಶಿ ಕೇಳ್ತಾನೆ,
’ದೋನಿಗೆ ಆಸ್ಕರ್ ಸಿಗುತ್ತಾ?’
ದೊಡ್ಡ ಮಟ್ಟದಲ್ಲೇ ಏರಿದೆ ಪಾಪ
ನೆತ್ತಿಗೆ ಆಸ್ಕರ್ ಪಿತ್ತ!
(ತಪ್ಪು ಮಾಧ್ಯಮಗಳದ್ದು,
ಗೊತ್ತಾ?)
***
-6-
ದೋನಿಯನ್ನು ಸೆಳೆಯಲು
ಆಪರೇಷನ್ ಕಮಲ
ನಡೆದರೆ
ಆಶ್ಚರ್ಯವಿಲ್ಲ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)





